ಮಂಗಳೂರು,: ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ವಿಪರೀತ ವರ್ಗಾವಣೆಗೆ ಅಧಿಕಾರಿಗಳು ರೋಸಿ ಹೋಗಿದ್ದಾರೆ. ಇದಕ್ಕೆ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ನಿದರ್ಶನವಾಗಿದೆ ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಶಾಸಕರು, ರಾಜೀನಾಮೆ ಹಿಂದೆಗೆದುಕೊಳ್ಳುವಂತೆ ಸಸಿಕಾಂತ್ ಸೆಂಥಿಲ್ ಅವರನ್ನು ಮನವೊಲಿಸುವಂತೆ ಮುಖ್ಯ ಕಾರ್ಯದರ್ಶಿಯನ್ನು ಒತ್ತಾಯಿಸಿದ್ದೇನೆ ಎಂದರು.
ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಅಧಿಕಾರಕ್ಕೆ ಬಂದಾಗಿನಿಂದ ಮೇಲಿಂದ ಮೇಲೆ ಅಧಿಕಾರಿಗಳ ವರ್ಗಾವಣೆ ಪರ್ವ ಇನ್ನಿಲ್ಲದಂತೆ ಮುಂದುವರಿದಿದೆ. ಎಲ್ಲ ಇಲಾಖೆಗಳ ಅಧಿಕಾರಿಗಳು ರೋಸಿ ಹೋಗಿದ್ದಾರೆ. ಉಡುಪಿ ಜಿಲ್ಲಾಧಿಕಾರಿ, ದ.ಕ. ಜಿಲ್ಲೆಯ ಹೌಸಿಂಗ್ ಬೋರ್ಡ್ನ ಅಧಿಕಾರಿ ಸೇರಿದಂತೆ ಇನ್ನು ಅಸಂಖ್ಯಾತ ಸಂಖ್ಯೆಯಲ್ಲಿ ವರ್ಗಾವಣೆ ಪ್ರಕ್ರಿಯೆಗಳು ನಡೆಯುತ್ತಿವೆ ಎಂದರು.
ಯಾವುದೇ ಅಧಿಕಾರಿ ರಾಜೀನಾಮೆ ಸಲ್ಲಿಸುವ ಆಲೋಚನೆ ಮಾಡುತ್ತಾರೆಂದರೆ, ಅಂಥವರು ಕೆಲಸ ಮಾಡುವ ಸ್ಥಳದಲ್ಲಿ ಉತ್ತಮ ವಾತಾವರಣವಿಲ್ಲ ಎನ್ನುವುದು ಇದರಿಂದ ಖಾತರಿಯಾಗುತ್ತದೆ. ಇಚ್ಛೆಗೆ ಅನುಗುಣವಾಗಿ ಕೆಲಸ ಮಾಡಲು ಬಿಟ್ಟರೆ ಯಾರೂ ಹುದ್ದೆಯನ್ನು ತ್ಯಜಿಸುವುದಿಲ್ಲ ಎಂದು ಹೇಳಿದರು.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…