ಬೆಂಗಳೂರು: ಬಿಜೆಪಿ ನಾಯಕರ ಹಾಗೂ ಕಾರ್ಯಕರ್ತರ ನನ್ನೊಂದಿಗಿನ ಒಡನಾಟ ಬಹಳ ಚೆನ್ನಾಗಿದೆ. ನಾನು ಬಿಜೆಪಿಗೆ ಸೇರ್ಪಡೆಗೊಂಡು ಒಳ್ಳೆಯ ಕೆಲಸ ಮಾಡಿದ್ದೇನೆ ಹಾಗೂ ಇದರಿಂದ ತುಂಬಾ ಖುಷಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಜನರಿಗಾಗಿ ಅನೇಕ ಕೆಲಸ ಮಾಡುತ್ತಿದ್ದು, ಅವರ ಜೋತೆ ಅಭಿವೃದ್ಧಿಯ ಪತದಲ್ಲಿ ನಾವೆಲ್ಲ ಸೇರಿಕೊಂಡಿರುವುದೇ ಹೆಮ್ಮೆಯ ವಿಷಯವಾಗಿದೆ. 2024ರಲ್ಲೂ ಮತ್ತೆ ಮೋದಿ ಗೆದ್ದು ಪ್ರಧಾನಿಯಾಗುವುದು ಖಂಡಿತ. ಪ್ರಾದೇಶಿಕ ಪಕ್ಷಗಳ ಜೊತೆಗೆ ಸೇರಿಕೊಂಡು ಬಿಜೆಪಿಗೆ ಪೈಪೋಟಿ ನೀಡುವ ಶಕ್ತಿ ಈಗಲೂ ಕಾಂಗ್ರೆಸ್ ಪಕ್ಷಕ್ಕಿದೆ. ಆದರೆ, ಮೋದಿ ಗೆಲ್ಲುವುದನ್ನು ತಪ್ಪಿಸಲಾಗದು ಎಂದೂ ಹೇಳಿದ್ದಾರೆ.
ಈ ಬಗ್ಗೆ ಸಂದರ್ಶನವೊಂದರಲ್ಲಿಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಒಂದು ವಿಶಿಷ್ಟ ಶಕ್ತಿಯಿದೆ. ಪ್ರಧಾನಿ ಮೋದಿಯವರ ಸೂಕ್ಷ್ಮ ಚಿಂತನೆ, ಎಲ್ಲರಿಗೂ ಸ್ಪಂದಿಸುವ ಗುಣದಿಂದ ದೇಶದಲ್ಲೀಗ ಉತ್ತಮ ಆರ್ಥಿಕ ವಾತಾವರಣ ಮತ್ತು ರಾಜಕೀಯವಿದೆ. ಪ್ರಧಾನಿ ಅಥವಾ ಬಿಜೆಪಿ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪವಿಲ್ಲ. ಆರೋಪ ಮಾಡಲು ಬಂದವರೇ ಭ್ರಷ್ಟಾಚಾರಿಗಳಾಗಿದ್ದಾರೆ. ಮೋದಿಯವರು ದೇಶಕ್ಕಾಗಿ ನಿರ್ಧಾರ ಕೈಗೊಳ್ಳುವ ಮುನ್ನ ಸಾವಿರ ಬಾರಿ ಯೋಚಿಸಿ, ಬಹಳಷ್ಟುಜನರ ಸಲಹೆ ಕೇಳುತ್ತಾರೆ. ಆದರೆ, ಕೊನೆಗೆ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುತ್ತಾರೆ. ಆದರೆ ಎಲ್ಲಾದರೂ ತಪ್ಪಾದರೆ ಅವರು ಯಾರನ್ನೂ ದೂಷಿಸುವುದಿಲ್ಲ ಎಂದು ಹೇಳಿದರು.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…