ಬೆಂಗಳೂರು: ಬಿಜೆಪಿ ನಾಯಕರ ಹಾಗೂ ಕಾರ್ಯಕರ್ತರ ನನ್ನೊಂದಿಗಿನ ಒಡನಾಟ ಬಹಳ ಚೆನ್ನಾಗಿದೆ. ನಾನು ಬಿಜೆಪಿಗೆ ಸೇರ್ಪಡೆಗೊಂಡು ಒಳ್ಳೆಯ ಕೆಲಸ ಮಾಡಿದ್ದೇನೆ ಹಾಗೂ ಇದರಿಂದ ತುಂಬಾ ಖುಷಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಜನರಿಗಾಗಿ ಅನೇಕ ಕೆಲಸ ಮಾಡುತ್ತಿದ್ದು, ಅವರ ಜೋತೆ ಅಭಿವೃದ್ಧಿಯ ಪತದಲ್ಲಿ ನಾವೆಲ್ಲ ಸೇರಿಕೊಂಡಿರುವುದೇ ಹೆಮ್ಮೆಯ ವಿಷಯವಾಗಿದೆ. 2024ರಲ್ಲೂ ಮತ್ತೆ ಮೋದಿ ಗೆದ್ದು ಪ್ರಧಾನಿಯಾಗುವುದು ಖಂಡಿತ. ಪ್ರಾದೇಶಿಕ ಪಕ್ಷಗಳ ಜೊತೆಗೆ ಸೇರಿಕೊಂಡು ಬಿಜೆಪಿಗೆ ಪೈಪೋಟಿ ನೀಡುವ ಶಕ್ತಿ ಈಗಲೂ ಕಾಂಗ್ರೆಸ್ ಪಕ್ಷಕ್ಕಿದೆ. ಆದರೆ, ಮೋದಿ ಗೆಲ್ಲುವುದನ್ನು ತಪ್ಪಿಸಲಾಗದು ಎಂದೂ ಹೇಳಿದ್ದಾರೆ.
ಈ ಬಗ್ಗೆ ಸಂದರ್ಶನವೊಂದರಲ್ಲಿಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಒಂದು ವಿಶಿಷ್ಟ ಶಕ್ತಿಯಿದೆ. ಪ್ರಧಾನಿ ಮೋದಿಯವರ ಸೂಕ್ಷ್ಮ ಚಿಂತನೆ, ಎಲ್ಲರಿಗೂ ಸ್ಪಂದಿಸುವ ಗುಣದಿಂದ ದೇಶದಲ್ಲೀಗ ಉತ್ತಮ ಆರ್ಥಿಕ ವಾತಾವರಣ ಮತ್ತು ರಾಜಕೀಯವಿದೆ. ಪ್ರಧಾನಿ ಅಥವಾ ಬಿಜೆಪಿ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪವಿಲ್ಲ. ಆರೋಪ ಮಾಡಲು ಬಂದವರೇ ಭ್ರಷ್ಟಾಚಾರಿಗಳಾಗಿದ್ದಾರೆ. ಮೋದಿಯವರು ದೇಶಕ್ಕಾಗಿ ನಿರ್ಧಾರ ಕೈಗೊಳ್ಳುವ ಮುನ್ನ ಸಾವಿರ ಬಾರಿ ಯೋಚಿಸಿ, ಬಹಳಷ್ಟುಜನರ ಸಲಹೆ ಕೇಳುತ್ತಾರೆ. ಆದರೆ, ಕೊನೆಗೆ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುತ್ತಾರೆ. ಆದರೆ ಎಲ್ಲಾದರೂ ತಪ್ಪಾದರೆ ಅವರು ಯಾರನ್ನೂ ದೂಷಿಸುವುದಿಲ್ಲ ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…