Featured

ಬಿಜೆಪಿ ಪಕ್ಷದವರು ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲು ಹೊರಟಿದ್ದಾರೆ : ಸಿದ್ದರಾಮಯ್ಯ – Vishwanews24

ಬಿಜೆಪಿ ಪಕ್ಷದವರು ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲು ಹೊರಟಿದ್ದಾರೆ : ಸಿದ್ದರಾಮಯ್ಯ – Vishwanews24

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಬಚಾವೊ, ಭೇಟಿ ಪಡಾವೋ ಎನ್ನುತ್ತಾರೆ ಆದರೆ ಬಿಜೆಪಿ ಪಕ್ಷದವರೇ ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲು ಹೊರಟಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಪಾದಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ” ಹಿಜಾಬ್ ವಿವಾದದ ಹಿಂದೆ ಯಾವುದೇ ಸಂಘಟನೆ ಇದ್ದರೂ ಅದನ್ನು ಖಂಡಿಸುತ್ತೇನೆ. ಅದು ಆರ್.ಎಸ್.ಎಸ್ ಇರಲಿ, ಎಸ್.ಡಿ.ಪಿ.ಐ ಇರಲಿ, ಭಜರಂಗ ದಳವಿರಲಿ. ಮೂಲಭೂತವಾದಿ ಸಂಘಟನೆಗಳು ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಮಾರಕ ಎಂದು ಹೇಳಿದ್ದಾರೆ.

ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆದು, ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿಎಸ್ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ನಲ್ಲಿ ಮಧ್ಯಂತರ ತೀರ್ಪು ಬಂದಿದೆ. ಶಾಲಾಭಿವೃದ್ಧಿ ಕಮಿಟಿ ಇರುವ ಕಡೆಗಳಲ್ಲಿ ಸಮಿತಿಯು ಸಮವಸ್ತ್ರ ನೀತಿ ರೂಪಿಸಿದ್ದರೆ ಅಲ್ಲಿ ಮಾತ್ರ ಈ ಆದೇಶ ಅನ್ವಯವಾಗುತ್ತದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧೀನದಲ್ಲಿನ ವಸತಿ ಶಾಲಾ ಕಾಲೇಜುಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳು (ಆಂಗ್ಲ ಮಾಧ್ಯಮ) ಶಾಲೆಗಳಿಗೂ ಹೈಕೋರ್ಟ್ ತೀರ್ಪು ಅನ್ವಯವಾಗುತ್ತದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ. ಮೊದಲನೆಯದಾಗಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾಭಿವೃದ್ಧಿ ಸಮಿತಿಯೇ ಇರುವುದಿಲ್ಲ, ಶಾಲಾಭಿವೃದ್ಧಿ ಸಮಿತಿ ರೂಪಿಸಿದ ಸಮವಸ್ತ್ರ ನೀತಿಗೆ ಮಾತ್ರ ಹೈಕೋರ್ಟ್ ತೀರ್ಪು ಅನ್ವಯವಾಗುತ್ತದೆ. ಹಾಗಾಗಿ ಈ ಸುತ್ತೋಲೆ ಘನ ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗುತ್ತದೆ ಎಂದು ಆರೋಪಿಸಿದ್ದಾರೆ.

ಅಲ್ಪಸಂಖ್ಯಾತ ನಿಯೋಗದ ಜೊತೆ ನಾನು, ಡಿ.ಕೆ ಶಿವಕುಮಾರ್ ಅವರು ಇಂದು ಮುಖ್ಯಮಂತ್ರಿ ಬಿ.ಎಸ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಗೊಂದಲ ನಿವಾರಿಸುವಂತೆ ಹೇಳಿದ್ದೇವೆ. ಯಾವ ಮಕ್ಕಳೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಕಾಳಜಿ ಎಂದು ಹೇಳಿದ್ದಾರೆ.

 

Vishwa News 24

Recent Posts

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

36 minutes ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

49 minutes ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

1 hour ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

1 hour ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

1 hour ago

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…

2 hours ago