ಕಾರ್ಕಳ: ಕಾರ್ಕಳದಲ್ಲಿ ಬಿಜೆಪಿಯಿಂದ ಚುನಾಯಿತರಾದ ಶಾಸಕರು ರಾಜ್ಯದ ಮಂತ್ರಿಯಾದಾಗಲೆ ಕಾರ್ಕಳವು ಅಭಿವೃದ್ದಿಗೆ ಸಾಕ್ಷಿಯಾಗಿದೆ ಎಂದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದರು.
ಅವರು ಕಾರ್ಕಳ ತಾಲೂಕಿನ ಅಜೆಕಾರು ಜ್ಯೋತಿ ಹೈಸ್ಕೂಲ್ ಬಳಿಯ ಮೈದಾನ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಬೈಕ್ ರ್ಯಾಲಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಬಿಜೆಪಿ ಸರಕಾರವು ರಾಜ್ಯವನ್ನು ಅಭಿವೃದ್ಧಿ ಮಾಡಿದೆ. ಅದರಂತೆಯೆ ಕಾರ್ಕಳಕ್ಕೆ ಬಿಜೆಪಿ ಪಕ್ಷವೆ ಅಭಿವೃದ್ಧಿ ಸಾಕ್ಷಿಯಾಗಿದೆ. ಈ ಬಾರಿ ಸಚಿವ ಸುನೀಲ್ ಕುಮಾರ್ ಒಂದು ಲಕ್ಷ ಅಂತರದಲ್ಲಿ ಚುನಾವಣೆಯಲ್ಲಿ ಗೆಲ್ಲಿಸುವ ನಮ್ಮ ಕಾರ್ಯವಾಗಬೇಕು. ಶಕ್ತಿ ಕೆಂದ್ರದ ಸದಸ್ಯರು ಕಾರ್ಯಕರ್ತರು ಮುಂದಿನ 50 ದಿನಗಳ ಕಾಲ ಮನೆಮನೆಗೆ ತೆರಳಿ ಸಾಧನೆಯನ್ನು ತಿಳಿಸಬೇಕು ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.
ರಾಜ್ಯದಲ್ಲಿ ವಿಧಾನಸೌಧದ ಆಡಳಿತ ಚುಕ್ಕಾಣಿ ಹಿಡಿಯಲು 113 ಇದ್ದ ಮ್ಯಾಜಿಕ್ ನಂಬರನ್ನು ದಾಟಿಸಿ 150 ಶಾಸಕರನ್ನು ಚುನಾಯಿಸಿ ಗೆಲ್ಲಿಸಬೇಕು ಉಡುಪಿ ಜಿಲ್ಲೆಯಲ್ಲಿ, ತಾಲೂಕು ಗಳಲ್ಲಿ ಜಿಲ್ಲಾಡಳಿತ, ಪುರಸಭೆ , ಪಂಚಾಯತ್ ಗಳಲ್ಲಿ ಬೆಜೆಪಿ ಪಕ್ಷನೆ ಇದೆ ಎಲ್ಲಾ ಕಡೆಗಳಲ್ಲಿಯೂ ಬಿಜೆಪಿ ಪಕ್ಷವೆ ಬರಬೇಕು. ಅಗವೆ ಆಡಳಿತ ಸುಸೂತ್ರವಾಗಿ ನಡೆಯಲು ಸಾಧ್ಯ ವಾಗಲಿದೆ ಎಂದರು.
ಈ ಬಾರಿ ಐತಿಹಾಸಿಕ ಬೈಕ್ ರ್ಯಾಲಿ ನಡೆಸಿರೋದು ಕಾಂಗ್ರೇಸ್ ಪಕ್ಷವನ್ನು ಬೆದರಿಸಲು ಅಲ್ಲಾ ಬಿಜೆಪಿ ಕಾರ್ಯಕರ್ತರನ್ನು ಹುರುಪು ತುಂಬಿಸಲು ಆದರೆ ಕಾರ್ಕಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೆ ಇಲ್ಲ ಎಂದು ಅಣ್ಣಾಮಲೈ ವ್ಯಂಗ್ಯವಾಡಿದರು.
ನಾನೇಕೆ ತೇಜಸ್ವಿ ಜೊತೆಗಿರುವೆ ಬಗ್ಗೆ ಮಾಹಿತಿ ಹೊರಹಾಕಿದ ಅಣ್ಣಾಮಲೈ ತೇಜಸ್ವಿ ಸೂರ್ಯ ರಾಷ್ಟ್ರೀಯ ಯುವ ನಾಯಕ ಆತನಲ್ಲಿ ದೇಶದ ಭವಿಷ್ಯದ ಚಿಂತನೆಗಳಿವೆ ಅದಕ್ಕೆ ಹೊಸತನವನ್ನು ಕೊಡುವ ಜಾಣ್ಮೆ ಇದೆ .ನನ್ನ ಚಿಂತನೆಗಳಿಗು ಸಾಮ್ಯಾತೆ ಅವರಲ್ಲಿದೆ ಎಂದರು.
ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಸ್ವಾಗತಿಸಿದರು. ಹರೀಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…