ಕೋಲ್ಕತ: ಬಿಜೆಪಿ ಪಕ್ಷ ಒಂದು ಉಗ್ರ ಸಂಘಟನೆ, ಆ ಪಕ್ಷ ಜಾತಿ ಮತ್ತು ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಮತ್ತು ಟಿಎಂಸಿ ಪಕ್ಷದ ಕಾರ್ಯಕರ್ತರ ಮೇಲೆ ದಾಳಿ ನಡೆಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ.
ತೃಣಮೂಲ ಕಾಂಗ್ರೆಸ್ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಇಂದು ಮಾತನಾಡಿದ ಅವರು ನಾವು ಬಿಜೆಪಿ ಪಕ್ಷದಂತೆ ಉಗ್ರ ಸಂಘಟನೆಯಲ್ಲ. ಅವರು ಅಹಂಕಾರಿಗಳು ಮತ್ತು ಅಸಹಿಷ್ಣುಗಳು, ಜತೆಗೆ ಧಾರ್ಮಿಕವಾಗಿ ಪಕ್ಷಪಾತ ನೀತಿ ಉಳ್ಳವರು. ಅವರು ಮುಸ್ಲಿಮ್, ಕ್ರೈಸ್ತ ಮತ್ತು ಸಿಖ್ ಧರ್ಮಗಳನ್ನು ಇಷ್ಟ ಪಡುವುದಿಲ್ಲ. ಜತೆಗೆ ಹಿಂದುಗಳಲ್ಲೂ ಮೇಲ್ವರ್ಗ ಮತ್ತು ಕೆಳವರ್ಗದ ಜನರ ನಡುವೆ ತಾರತಮ್ಯ ಮಾಡುತ್ತಿದೆ.
ಬಿಜೆಪಿ ಪಕ್ಷ ದೆಹಲಿಯಲ್ಲಿ ಅಧಿಕಾರದಲ್ಲಿದೆ ಎಂಬ ಮಾತ್ರಕ್ಕೆ ಎನ್ಕೌಂಟರ್ ನಡೆಸುವ ಬೆದರಿಕೆ ಒಡ್ಡುತ್ತಿದ್ದಾರೆ. ಬಾಂಬ್ ದಾಳಿ ನಡೆಸುವ ಕುರಿತು ಮಾತನಾಡುತ್ತಿದ್ದಾರೆ. ಅವರು ನಮ್ಮ ತಂಟೆಗೆ ಬಂದರೆ ನಾವು ಸುಮ್ಮನಿರುವುದಿಲ್ಲ, ಅವರಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ ಎಂದು ಮಮತಾ ಕಿಡಿ ಕಾರಿದ್ದಾರೆ.
ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಅವರು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸುವುದನ್ನು ಸಹಿಸಲು ಸಾಧ್ಯವಿಲ್ಲ, ನಾವು ಸೂಕ್ತ ಪ್ರತ್ಯುತ್ತರ ನೀಡುತ್ತೇವೆ ಎಂದು ತಿಳಿಸಿದ್ದರು
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…