Featured

ಬಿಜೆಪಿ ಪರ ನಾನು ಯಾಕೇ ಪ್ರಚಾರ ಮಾಡಲಿ…? ಬಿಜೆಪಿ ವಿರುದ್ಧ ತಿರುಗಿಬಿದ್ದ ಬಾಬಾ ರಾಮ್‍ದೇವ್.

ನವದೆಹಲಿ: ತೈಲ ಬೆಲೆ ಏರಿಕೆಯನ್ನು ನಿಯಂತ್ರಿಸದೇ ಇದ್ದರೆ ನರೇಂದ್ರ ಮೋದಿ ಸರ್ಕಾರಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಯೋಗ ಗುರು ಬಾಬಾ ರಾಮ ದೇವ್ ಎಚ್ಚರಿಕೆ ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ತಾನು ಭಾಗಿಯಾಗುವುದಿಲ್ಲ ಎಂದು ಹೇಳಿದ ರಾಮದೇವ್, ನನಗೆ ಅವಕಾಶ ನೀಡಿದರೆ ಪೆಟ್ರೋಲ್ ಮತ್ತು ಡೀಸೆಲ್‍ನ್ನು ಈಗಿರುವ ಬೆಲೆಯ ಅರ್ಧ ಬೆಲೆಗೆ ಮಾರುವುದಾಗಿ ಹೇಳಿದ್ದಾರೆ.

2015ರಲ್ಲಿ ರಾಮದೇವ್ ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿದ್ದರು. ಅದರ ನಂತರದ ವರ್ಷದಲ್ಲಿ ಅವರನ್ನು ಹರ್ಯಾಣದ ರಾಯಭಾರಿಯನ್ನಾಗಿ ಮಾಡಿ ಸಂಪುಟ ಸಚಿವರ ದರ್ಜೆಯ ಅನುಕೂಲಗಳನ್ನು ನೀಡುವುದರ ಜತೆಗೆ ಕೆಂಪುಗೂಟದ ಕಾರು, ರಕ್ಷಣಾ ಸಿಬ್ಬಂದಿ ಮತ್ತು ಬೆಂಗಾವಲು ವಾಹನಗಳನ್ನೂ ನೀಡಲಾಗಿತ್ತು.

ಇದೀಗ ನೀವು ಬಿಜೆಪಿ ಪರ ಚುನಾವಣಾ ಪ್ರಚಾರಕ್ಕಿಳಿಯುತ್ತೀರಾ? ಎಂದು ಕೇಳಿದರೆ ನಾನು ಯಾಕೆ ಪ್ರಚಾರ ಮಾಡಬೇಕು ಎಂದು ಉತ್ತರಿಸಿದ್ದಾರೆ ರಾಮದೇವ್.

ನಾನು ಈಗ ರಾಜಕೀಯದಿಂದ ದೂರ ಸರಿದಿದ್ದೇನೆ. ನಾನು ಎಲ್ಲ ಪಕ್ಷದವರೊಂದಿಗೆ ಇದ್ದೇನೆ ಆದರೆ ನಾನು ಯಾವ ಪಕ್ಷದೊಂದಿಗೂ ಇಲ್ಲ ಎಂದು ಎನ್‍ಡಿಟಿವಿ ಯುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಹೇಳಿದ್ದಾರೆ.
ಯಾವುದೇ ಕಾರಣ, ವಿವರಣೆ ನೀಡದೆಯೇ ಪ್ರಧಾನಿ ಮೋದಿಯವರನ್ನು ಟೀಕಿಸುವುದು ನಮ್ಮ ಹಕ್ಕು ಎಂದು ಹೇಳಿದ ಬಾಬಾ, ಮರುಗಳಿಗೆಯಲ್ಲಿಯೇ ಪ್ರಧಾನಿ ಮೋದಿ ಉತ್ತಮ ಕೆಲಸ ಮಾಡಿದ್ದಾರೆ. ಸ್ವಚ್ಛ ಭಾರತ ಅಭಿಯಾನವನ್ನು ಮಾಡಿದ್ದಾರೆ. ಯಾವುದೇ ದೊಡ್ಡ ಹಗರಣಗಳನ್ನು ಮಾಡಲು ಬಿಡಲಿಲ್ಲ ಎಂದಿದ್ದಾರೆ.
ಸರ್ಕಾರ ಇಂಧನಕ್ಕೂ ಜಿಎಸ್‍ಟಿ ಅನ್ವಯ ಮಾಡಬೇಕು. ಆದರೆ ತೆರಿಗೆ ಶೇ.28ಕ್ಕಿಂತ ಹೆಚ್ಚಿರಬಾರದು. ಆದಾಯದಲ್ಲಿನ ನಷ್ಟ ದೇಶದ ಪ್ರಗತಿಯನ್ನು ಬಾಧಿಸಬಾರದು. ಶ್ರೀಮಂತರ ಮೇಲೆ ನಾವು ತೆರಿಗೆ ಹಾಕಬೇಕು ಎಂದ ಬಾಬಾ ಅವರಲ್ಲಿ
ಅದು ಹೇಗೆ ನೀವು ಪೆಟ್ರೋಲ್ ದರವನ್ನು ಕಡಿಮೆ ಮಾಡುತ್ತೀರಿ ಎಂದು ಕೇಳಿದಾಗ, ಸರ್ಕಾರ ನನಗೆ ಅವಕಾಶ ನೀಡಿದರೆ ಮತ್ತು ತೆರಿಗೆಯಲ್ಲಿ ಕಡಿತ ಮಾಡಿದರೆ ನಾನು ಪೆಟ್ರೋಲ್, ಡೀಸೆಲ್ ಲೀಟರ್‌ಗೆ ₹30-₹40 ಮಾಡಬಲ್ಲೆ ಎಂದಿದ್ದಾರೆ.

ಜಾಹಿರಾತು: ಪಂಡೀತ್ ಸುದರ್ಶನ್ ಭಟ್

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

19 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

20 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

20 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

23 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

23 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

23 hours ago