Featured

ಬಿಜೆಪಿ ಪರ ನಾನು ಯಾಕೇ ಪ್ರಚಾರ ಮಾಡಲಿ…? ಬಿಜೆಪಿ ವಿರುದ್ಧ ತಿರುಗಿಬಿದ್ದ ಬಾಬಾ ರಾಮ್‍ದೇವ್.

ನವದೆಹಲಿ: ತೈಲ ಬೆಲೆ ಏರಿಕೆಯನ್ನು ನಿಯಂತ್ರಿಸದೇ ಇದ್ದರೆ ನರೇಂದ್ರ ಮೋದಿ ಸರ್ಕಾರಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಯೋಗ ಗುರು ಬಾಬಾ ರಾಮ ದೇವ್ ಎಚ್ಚರಿಕೆ ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ತಾನು ಭಾಗಿಯಾಗುವುದಿಲ್ಲ ಎಂದು ಹೇಳಿದ ರಾಮದೇವ್, ನನಗೆ ಅವಕಾಶ ನೀಡಿದರೆ ಪೆಟ್ರೋಲ್ ಮತ್ತು ಡೀಸೆಲ್‍ನ್ನು ಈಗಿರುವ ಬೆಲೆಯ ಅರ್ಧ ಬೆಲೆಗೆ ಮಾರುವುದಾಗಿ ಹೇಳಿದ್ದಾರೆ.

2015ರಲ್ಲಿ ರಾಮದೇವ್ ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿದ್ದರು. ಅದರ ನಂತರದ ವರ್ಷದಲ್ಲಿ ಅವರನ್ನು ಹರ್ಯಾಣದ ರಾಯಭಾರಿಯನ್ನಾಗಿ ಮಾಡಿ ಸಂಪುಟ ಸಚಿವರ ದರ್ಜೆಯ ಅನುಕೂಲಗಳನ್ನು ನೀಡುವುದರ ಜತೆಗೆ ಕೆಂಪುಗೂಟದ ಕಾರು, ರಕ್ಷಣಾ ಸಿಬ್ಬಂದಿ ಮತ್ತು ಬೆಂಗಾವಲು ವಾಹನಗಳನ್ನೂ ನೀಡಲಾಗಿತ್ತು.

ಇದೀಗ ನೀವು ಬಿಜೆಪಿ ಪರ ಚುನಾವಣಾ ಪ್ರಚಾರಕ್ಕಿಳಿಯುತ್ತೀರಾ? ಎಂದು ಕೇಳಿದರೆ ನಾನು ಯಾಕೆ ಪ್ರಚಾರ ಮಾಡಬೇಕು ಎಂದು ಉತ್ತರಿಸಿದ್ದಾರೆ ರಾಮದೇವ್.

ನಾನು ಈಗ ರಾಜಕೀಯದಿಂದ ದೂರ ಸರಿದಿದ್ದೇನೆ. ನಾನು ಎಲ್ಲ ಪಕ್ಷದವರೊಂದಿಗೆ ಇದ್ದೇನೆ ಆದರೆ ನಾನು ಯಾವ ಪಕ್ಷದೊಂದಿಗೂ ಇಲ್ಲ ಎಂದು ಎನ್‍ಡಿಟಿವಿ ಯುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಹೇಳಿದ್ದಾರೆ.
ಯಾವುದೇ ಕಾರಣ, ವಿವರಣೆ ನೀಡದೆಯೇ ಪ್ರಧಾನಿ ಮೋದಿಯವರನ್ನು ಟೀಕಿಸುವುದು ನಮ್ಮ ಹಕ್ಕು ಎಂದು ಹೇಳಿದ ಬಾಬಾ, ಮರುಗಳಿಗೆಯಲ್ಲಿಯೇ ಪ್ರಧಾನಿ ಮೋದಿ ಉತ್ತಮ ಕೆಲಸ ಮಾಡಿದ್ದಾರೆ. ಸ್ವಚ್ಛ ಭಾರತ ಅಭಿಯಾನವನ್ನು ಮಾಡಿದ್ದಾರೆ. ಯಾವುದೇ ದೊಡ್ಡ ಹಗರಣಗಳನ್ನು ಮಾಡಲು ಬಿಡಲಿಲ್ಲ ಎಂದಿದ್ದಾರೆ.
ಸರ್ಕಾರ ಇಂಧನಕ್ಕೂ ಜಿಎಸ್‍ಟಿ ಅನ್ವಯ ಮಾಡಬೇಕು. ಆದರೆ ತೆರಿಗೆ ಶೇ.28ಕ್ಕಿಂತ ಹೆಚ್ಚಿರಬಾರದು. ಆದಾಯದಲ್ಲಿನ ನಷ್ಟ ದೇಶದ ಪ್ರಗತಿಯನ್ನು ಬಾಧಿಸಬಾರದು. ಶ್ರೀಮಂತರ ಮೇಲೆ ನಾವು ತೆರಿಗೆ ಹಾಕಬೇಕು ಎಂದ ಬಾಬಾ ಅವರಲ್ಲಿ
ಅದು ಹೇಗೆ ನೀವು ಪೆಟ್ರೋಲ್ ದರವನ್ನು ಕಡಿಮೆ ಮಾಡುತ್ತೀರಿ ಎಂದು ಕೇಳಿದಾಗ, ಸರ್ಕಾರ ನನಗೆ ಅವಕಾಶ ನೀಡಿದರೆ ಮತ್ತು ತೆರಿಗೆಯಲ್ಲಿ ಕಡಿತ ಮಾಡಿದರೆ ನಾನು ಪೆಟ್ರೋಲ್, ಡೀಸೆಲ್ ಲೀಟರ್‌ಗೆ ₹30-₹40 ಮಾಡಬಲ್ಲೆ ಎಂದಿದ್ದಾರೆ.

ಜಾಹಿರಾತು: ಪಂಡೀತ್ ಸುದರ್ಶನ್ ಭಟ್

Vishwa News 24

Recent Posts

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

3 minutes ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

3 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago