ನವದೆಹಲಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ‘ಸಂಕಲ್ಪ ಪತ್ರ’ ಎಂಬ ಹೆಸರಿನಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ನವದೆಹಲಿಯಲ್ಲಿ ಏ 8ರ ಸೋಮವಾರ ಬಿಡುಗಡೆ ಮಾಡಿದೆ.
45 ಪುಟಗಳ ‘ಸಂಕಲ್ಪ ಪತ್ರ’ ಹೆಸರಿನ ಪ್ರಣಾಳಿಕೆಯಲ್ಲಿ ರಾಷ್ಟ್ರೀಯ ಭದ್ರತೆಗೆ ಮೊದಲ ಸ್ಥಾನವನ್ನು ನೀಡಲಾಗಿದೆ. 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುತ್ತೇವೆ. ರಾಮ ಮಂದಿರವನ್ನು ನಿರ್ಮಾಣ ಮಾಡುತ್ತೇವೆ ಎಂದು ಬಿಜೆಪಿ ತಿಳಿಸಿದೆ.
ಭಯೋತ್ಪಾದನೆ ನಿರ್ಮೂಲನೆ ನಮ್ಮ ಪ್ರಮುಖ ಗುರಿಯಾಗಿದ್ದು, ಸ್ವದೇಶಿ ಶಸ್ತ್ರಾಸ್ತ್ರಗಳ ನಿರ್ಮಾಣಕ್ಕೆ ಒತ್ತು ನೀಡುತ್ತೇವೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ 2022ಕ್ಕೆ ಒಂದು ಕುಟುಂಬಕ್ಕೆ ಒಂದು ಮನೆಯನ್ನು ನಿರ್ಮಿಸಿ ಕೊಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ತಿಳಿಸಿದೆ.
ಪ್ರಣಾಳಿಕೆ ಬಿಡುಗಡೆ ಸಂದರ್ಭ ಮಾತನಾಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ‘ನಮ್ಮ ಆಡಳಿತದಲ್ಲಿ ಒಂದೇ ಒಂದು ಹಗರಣ ನಡೆದಿಲ್ಲ. ಯುಪಿಎ ಆಡಳಿತದ ಹತ್ತು ವರ್ಷಗಳು ಹೇಗಿದ್ದವು ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಿ’ ಎಂದು ಹೆಮ್ಮೆಯಿಂದ ಹೇಳಿದರು.
‘ದೇಶದ ಆರ್ಥಿಕತೆ ಸುಧಾರಿಸಲು ನಮ್ಮ ಸರ್ಕಾರ ಸಾಕಷ್ಟು ಶ್ರಮವಹಿಸಿತು. ಬೆಳೆ ಉತ್ಪತ್ತಿ ಸುಧಾರಿಸಲು 12 ಕೋಟಿ ರೈತರಿಗೆ ಅಗತ್ಯ ನೆರವು ಒದಗಿಸಲಾಯಿತು. ವಿಶ್ವಮಟ್ಟದ ಹಲವು ಸೂಚ್ಯಂಕಗಳಲ್ಲಿ ನಮ್ಮ ಸ್ಥಿತಿಗತಿ ಸುಧಾರಿಸಿದೆ. 2014ರಿಂದ 2019ರ ಅವಧಿಯನ್ನು ದೇಶದ ಇತಿಹಾಸವು ಸುವರ್ಣಯುಗ ಎಂದೇ ನೆನಪಿರಿಸಿಕೊಳ್ಳುತ್ತದೆ’ ಎಂದು ಅವರು ಅಭಿಪ್ರಾಯಪಟ್ಟರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…