ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ : ಕಾಂಗ್ರೆಸ್ – Vishwanews24
ನಿಯಮದ ಪ್ರಕಾರ ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ..
ಬದುಕಿಗೆ ಶಾಶ್ವತ ದಾರಿ ತೋರಿಸದೆ ಇಂತಹ ಪೇಪರ್ ಚಾಪ್ಲೆಟ್ ನೀಡಿದ ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ..
ಟ್ವಿಟ್ ಮೂಲಕ ತಿರುಗೇಟು ಕಾಂಗ್ರೆಸ್..
ಮಂಗಳೂರು: ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಪತ್ನಿ ಕೆಲಸದಿಂದ ವಜಾಗೊಂಡಿರುವ ಬಗ್ಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಕಾಂಗ್ರೆಸ್ ಬಿಜೆಪಿ ವಿರುದ್ಧ ಪ್ರತ್ಯಾರೋಪ ಮಾಡಿದೆ.
ಭ್ರಷ್ಟಾಚಾರವೇ ಕುಲದೈವ ಎಂದು ನಂಬಿರುವ ಬಿಜೆಪಿಗೆ ನೀತಿ ನಿಯಮಗಳನ್ನು ಅಧ್ಯಯನ ಮಾಡಲು ಆಸಕ್ತಿ ಹಾಗೂ ಸಮಯ ಇರಲು ಸಾಧ್ಯವೇ? ನಿಯಮದ ಪ್ರಕಾರ ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ, ಬದುಕಿಗೆ ಶಾಶ್ವತ ದಾರಿ ತೋರಿಸದೆ ಇಂತಹ ಪೇಪರ್ ಚಾಪ್ಲೆಟ್ ನೀಡುವ ಮೂಲಕ ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ ಎಂದು ಕಾಂಗ್ರೆಸ್ ಟ್ವಿಟ್ ಮೂಲಕ ತಿರುಗೇಟು ನೀಡಿದೆ.
ಸುರತ್ಕಲ್: ನೂತನ ಕುಮಾರಿ ಅವರಿಗೆ ಉದ್ಯೋಗದ ಆದೇಶ ಪುನರ್ ಹೊರಡಿಸಬೇಕು : ಭರತ್ ಶೆಟ್ಟಿ – Vishwanews24
