ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಇಂದು (ಏ.12) ನಾಮಪತ್ರ ಸಲ್ಲಿಸಿದರು.
ಬೃಹತ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಉಮೇದುವಾರಿಕೆ ಸಲ್ಲಿಸಿದರು. ಪುತ್ರ ಕಾಂತೇಶ್ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಬಿಜೆಪಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿನ ಕುಟುಂಬ ರಾಜಕಾರಣದ ವಿರೋಧಿಸಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ.
ಈ ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ನಾನು ನರೇಂದ್ರ ಮೋದಿಯವರಿಗೆ ಬೆಂಬಲ ನೀಡುತ್ತೇನೆ ಎಂದು ಕೆಎಸ್ ಈಶ್ವರಪ್ಪ ಅವರು ಹೇಳಿದ್ದಾರೆ. ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಪ್ರತಿ ಮನೆ ಮನೆಗೆ ಹೋಗಿ ಈಶ್ವರಪ್ಪ ಏಕೆ ಚುನಾವಣೆಗೆ ನಿಂತಿದ್ದಾರೆ, ಏನು ಅನ್ಯಾಯ ಆಗಿದೆ ಅಂತ ನಮ್ಮ ಕಾರ್ಯಕರ್ತರು ತಿಳಿಸುತ್ತಾರೆ. ಅಪ್ಪ ಮಕ್ಕಳ ಕೈಯಲ್ಲಿ ಪಕ್ಷ ಏಕೆ ಇದೆ? ಚುನಾವಣೆ ಬಳಿಕ ನಂತರ ಬಿಜೆಪಿಯಲ್ಲಿ ಕೆಲವು ಬದಲಾವಣೆ ಆಗುತ್ತದೆ. ಪಕ್ಷ ಶುದ್ದೀಕರಣ ಆಗುವ ವಿಶ್ವಾಸ ಇದೆ ಎಂದು ನಾಮಪತ್ರ ಸಲ್ಲಿಕೆ ಬಳಿಕ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…