ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಸಿಡಿದೆದ್ದು, ಪಕ್ಷೇತರರಾಗಿ ಸ್ಪರ್ಧಿಸಿರುವ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪನವರ ರಾಷ್ಟ್ರಭಕ್ತ ಬಳಗ ಇದೀಗ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯೂ ಆಗಿರುವ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಬೆಂಬಲ ಘೋಷಿಸಿದೆ. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನಿವಾಸದಲ್ಲಿ ರಾಷ್ಟ್ರಭಕ್ತ ಬಳಗದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.
ಬಿಜೆಪಿ ಅಂದರೆ ಈಶ್ವರಪ್ಪ, ಈಶ್ವರಪ್ಪ ಅಂದರೆ ಪಕ್ಷ ಎನ್ನುತ್ತಿದ್ದ ಸಂದರ್ಭದಲ್ಲೇ ಪಕ್ಷೇತರನಾಗಿ ಸ್ಪರ್ಧಿಸುವ ಸಂದರ್ಭ ಎದುರಾಯಿತು. ಅದೇ ರೀತಿ ನಾನು ಸತ್ತರೆ ನನ್ನ ಎದೆ ಮೇಲೆ ಬಿಜೆಪಿ ಬಾವುಟ ಇರಬೇಕು ಎಂದು ಹೇಳುವ ರಘುಪತಿ ಭಟ್ ಅವರಿಗೂ ಪಕ್ಷದಲ್ಲಿ ಮೋಸವಾಯಿತು ಎಂದು ಈಶ್ವರಪ್ಪ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ನಿರಾಕರಿಸಿದಾಗ ರಾಷ್ಟ್ರೀಯ ನಾಯಕರ ಕರೆ ಬಂದಿತ್ತು. ಆದರೆ ಉಡುಪಿಯಲ್ಲಿ ರಘುಪತಿ ಭಟ್ಟರಿಗೆ ಕರೆ ಕೂಡ ಬರಲಿಲ್ಲ. ಟಿಕೆಟ್ ಘೋಷಣೆಗೆ ಎರಡು ದಿನ ಇರುವಾಗ ನಿನಗೆ ಟಿಕೆಟ್ ಎಂದು ಭಟ್ರಿಗೆ ಹೇಳಿದವರು ಕೊನೇ ಗಳಿಗೆಯಲ್ಲಿ ಮೋಸ ಮಾಡಿದರು. ಪಕ್ಷ ಎಂದರೆ ತಾವು ಮಾತ್ರ, ತಮ್ಮ ಕುಟುಂಬ ಮಾತ್ರ. ತಮ್ಮ ನಿರ್ಧಾರವೇ ಪಕ್ಷದ ನಿರ್ಧಾರ. ಹಿಂಬಾಲಕರಿಗೆ ಮಾತ್ರ ಎಲ್ಲ ಅವಕಾಶ ಎಂದು ಅಂದುಕೊಂಡವರಿಗೆ ಈ ಮೂಲಕ ಪಾಠ ಕಲಿಸಬೇಕೆಂದರು.
ನಮ್ಮ ಸ್ಪರ್ಧೆಯಿಂದ ಎಷ್ಟರಮಟ್ಟಿಗೆ ಪಕ್ಷ ಶುದ್ಧೀಕರಣ ಆಗುತ್ತದೆ ಎಂಬುದು ಲೋಕಸಭೆ, ವಿಧಾನ ಪರಿಷತ್ ಚುನಾವಣೆ ಫಲಿತಾಂಶದ ಬಳಿಕ ಗೊತ್ತಾಗುತ್ತದೆ. ಚುನಾವಣೆ ಮುಗಿಯುತ್ತಿದ್ದಂತೆ ರಘುಪತಿಗೆ ನೋಟಿಸ್ ಬರಬಹುದು. ನನಗೆ ಆಗ ಖುಷಿ. ನಾನೊಬ್ಬನೇ ಆಗಿದ್ದೆನಲ್ಲ, ಸದ್ಯ ಈಗ ಭಟ್ರು ಜೊತೆಗೆ ಬರ್ತಾರಲ್ಲ ಸಮಾಧಾನ ಎಂದು ಈಶ್ವರಪ್ಪ ಹೇಳಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…