Featured

ಬಿಜೆಪಿ ಬಡವರ ವಿರೋಧಿ, ಅವರು ಕೊಡೋದೂ ಇಲ್ಲ, ಕೊಟ್ಟವರನ್ನ ಸಹಿಸೋದು ಇಲ್ಲ : ರಾಮಲಿಂಗಾರೆಡ್ಡಿ – vishwanews24

ಬಿಜೆಪಿಯವರು ಬಡವರ ವಿರೋಧಿಗಳು ಗ್ಯಾರಂಟಿ ಯೋಜನೆ ಸಹಿಸುತ್ತಿಲ್ಲ : ರಾಮಲಿಂಗಾರೆಡ್ಡಿ

ಬೆಂಗಳೂರು: ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಬಿಜೆಪಿಯವರು ಬಡವರ ವಿರೋಧಿಗಳು ಗ್ಯಾರಂಟಿ ಯೋಜನೆ ಸಹಿಸುತ್ತಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ವಿಚಾರವಾಗಿ ಮಾತನಾಡಿದ ಅವರು, ಮೂರುವರೆ ವರ್ಷ ಎಲ್ಲಾ ಗ್ಯಾರಂಟಿ ಇದ್ದೇ ಇರುತ್ತದೆ. ಮುಂದೆ ಮತ್ತೆ ಚುನಾವಣೆ ಬರುತ್ತದೆ. ಆಗಲೂ ನಾವೇ ಗೆಲ್ಲುತ್ತೇವೆ. ಆಗಲೂ ಈ ಗ್ಯಾರಂಟಿ ಮುಂದುವರೆಯುತ್ತದೆ. ಬಿಜೆಪಿ ಬಡವರ ವಿರೋಧಿಗಳು. ಅವರು ಕೊಡೋದೂ ಇಲ್ಲ, ಕೊಟ್ಟವರನ್ನ ಸಹಿಸೋದು ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ಸಾಲ ಹೊರಿಸಿ ಹೋದವರು. ಎಲ್ಲಾ ಕಡೆ ಸಾವಿರಾರು ಕೋಟಿ ಸಾಲ ಇಟ್ಟು ಹೋಗಿದ್ದಾರೆ. ಅಭಿವೃದ್ಧಿಗೆ ಮಾಡುವ ಖರ್ಚಿನ ಹಣ ಸೇರಿ ಎಲ್ಲಾ ಕಡೆ ಸಾಲ ಇಟ್ಟು ಹೋಗಿದ್ದಾರೆ. ಈಗ ನಮ್ಮ ಮೇಲೆ ಹೇಳುತ್ತಾರೆ. ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ವಕ್ಫ್ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರಿಂದ ಹಿಡಿದು ಎಲ್ಲಾ ನಾಯಕರು ಆರಾಮವಾಗಿ ಇದ್ದಾರೆ. ಮುಂದಿನ ಐದು ವರ್ಷ ಕೂಡ ಅವರು ಬಿಡುವಾಗಿ ಇರುತ್ತಾರೆ. ವಿಪಕ್ಷದಲ್ಲೇ ಕೂರುತ್ತಾರೆ. ಹೀಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಮುಂದುವರೆದು ಈಗಾಗಲೇ ವಕ್ಫ್ ವಿಚಾರವಾಗಿ ಸಿಎಂ ಸ್ಪಷ್ಟನೆ ನೀಡಿದ್ದಾರೆ. ನೋಟಿಸ್ ಕೊಡಲು ಕಾರಣ ಯಾರು ಅಂದರೆ ಅದು ಬಿಜೆಪಿ ಅವರೇ. ಮಗು ಚಿವುಟೋದು ಅವರೇ, ತೊಟ್ಟಿಲು ತೂಗೋದು ಅವರೇ. ಅವರಿಂದಲೇ ನೋಟಿಸ್ ಕೊಟ್ಟಿದ್ದು ಅಲ್ವಾ. ಅದನ್ನು ಈಗ ನಾವು ನಿಲ್ಲಿಸುತ್ತಿದ್ದೇವೆ. ನಾವು ರೈತರ ಪರವಾಗಿ ಇದ್ದೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago