Featured

ಬಿಜೆಪಿ ಬಲವರ್ಧನೆಗೆ ಕಾರ್ಯಕರ್ತರು ದುಡಿಯಬೇಕು : ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ್  – Vishwanews24

ಬಿಜೆಪಿ ಬಲವರ್ಧನೆಗೆ ಕಾರ್ಯಕರ್ತರು ದುಡಿಯಬೇಕು : ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ್

ಮದ್ದೂರು: ‘ಜಿಲ್ಲೆಯಲ್ಲಿ ಬಿಜೆಪಿ ಬಲವರ್ಧನೆಗೆ ಕಾರ್ಯಕರ್ತರು ದುಡಿಯಬೇಕು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ್ ಸಲಹೆ ನೀಡಿದರು.

ಪಟ್ಟಣದ ಸೋಮೇಶ್ವರ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ಘಟ ನಾಯಕರು ಹಾಗೂ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು.

‘ಜೂನ್‌ನಲ್ಲಿ ನಡೆಯುವ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಸ್ಪರ್ಧಿಸಿದ್ದು, ಅವರ ಗೆಲುವಿಗೆ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು’ ಎಂದು ಮನವಿ ಮಾಡಿದರು.

ಮನ್‌ಮುಲ್ ನಿರ್ದೇಶಕ ಎಸ್.ಪಿ ಸ್ವಾಮಿ ಮಾತನಾಡಿ, ‘ಮೈ.ವಿ.ರವಿಶಂಕರ್ ಅವರಿಗೆ ತಾಲ್ಲೂಕಿನಲ್ಲಿ ಹೆಚ್ಚು ಮತಗಳು ಸಿಗುವಂತೆ ಕಾರ್ಯಕರ್ತರು ದುಡಿಯಬೇಕು’ ಎಂದು ಕರೆ ನೀಡಿದರು.

ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪಣ್ಣೇದೊಡ್ಡಿ ರಘು, ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಡಾ.ಸದಾನಂದ, ಮಧು ಗಂಗಾಧರ್, ರಾಜ್ಯ ವಕ್ತಾರರಾದ ಮಹೇಶ್, ಮುಖಂಡರಾದ ಮರಿ ಹೆಗಡೆ, ಬೋರಯ್ಯ, ಹನುಮಂತು, ಚಿಕ್ಕಂಕನಹಳ್ಳಿ ಮನು, ತಾಲ್ಲೂಕು ಘಟಕದ ಕಿಸಾನ್ ಮೋರ್ಚಾ ಅಧ್ಯಕ್ಷ ಶಿವದಾಸ್ ಸತೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ಮಹದೇವು, ತಾಲ್ಲೂಕು ಕಾರ್ಯದರ್ಶಿ ಹೊನ್ನಲಗೆರೆ ಸ್ವಾಮಿ, ಕದಲೂರು ಸುರೇಶ್ ಇದ್ದರು.

Vishwa News 24

Recent Posts

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

6 minutes ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

36 minutes ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

46 minutes ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

1 hour ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

1 hour ago

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ- vishwanews24

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.…

2 hours ago