ಮಂಗಳೂರು : ಮಂಡ್ಯದ ಕೆರಗೋಡು ನಲ್ಲಿ ಭಗವಾಧ್ವಜ ಪ್ರಕರಣದ ಮೂಲಕ ಬಿಜೆಪಿ ತನ್ನ ಹಿಡನ್ ಅಜೆಂಡಾವನ್ನು ಪ್ರದರ್ಶನ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್ ಎಸ್ ಎಸ್ ನ ನಾಗ್ಪುರ ಕಛೇರಿಯಲ್ಲಿ 52 ವರ್ಷಗಳ ಕಾಲ ರಾಷ್ಟ್ರ ಧ್ವಜ ಹಾರಿಸಿರಲಿಲ್ಲ. ಕೆರಗೋಡುನಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆ ಎಂದು ಅನುಮತಿ ಪಡೆದಿದ್ದರು ಆದ್ರೆ ಆದರೆ ಭಗವಾಧ್ವಜ ಹಾರಿಸಿ ಕೋಮು ಸೌಹಾರ್ದ ಕೆಡಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದರು. ಸರ್ಕಾರ ಶಾಂತಿ ಕಡೆಸುವ ಪ್ರಯತ್ನಗಳನ್ನು ಮಾಡಲು ಬಿಡಬಾರದು. ಸರ್ವ ಜನಾಂಗದ ಶಾಂತಿಯ ತೋಟ ಎಂದು ಪ್ರಣಾಳಿಕೆಯಲ್ಲಿ ಸರ್ಕಾರ ಹೇಳಿದೆ ಮತ್ತು ಸರ್ಕಾರ ಈ ಪ್ರಕರಣದಲ್ಲಿ ಭಾಗವಹಿಸಿದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ ಆರೋಪ ವಿಚಾರವಾಗಿ ಮಾತನಾಡಿದ ಅವರು ರಾಷ್ಟ್ರ ಧ್ವಜ ಹಾರಿಸಲು ಅವಕಾಶ ಮಾಡಿಕೊಟ್ಟಿರೋದು ಅಲ್ಪಸಂಖ್ಯಾತರ ಓಲೈಕೆ ಆಗುತ್ತಾ? ಬಿಜೆಪಿ ಬಹುಸಂಖ್ಯಾತರ ಓಲೈಕೆಗೆ ಭಗವಾಧ್ವಜ ಹಾರಿಸಿದೆ ಮತ್ತು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದೆ ಎಂದರು..
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…