Featured

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ..

ದಲಿತರಿಗೆ ಮೀಸಲಾತಿ ತಂದವರು ನಾವು ..

ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ ಬರಲಿಲ್ಲ..

ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟಿದ್ದು ಕಾಂಗ್ರೆಸ್ ,  ಬಿಜೆಪಿ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ: ಸಿದ್ದರಾಮಯ್ಯ

ಬಾಗಲಕೋಟೆ: ನಮ್ಮ ಜನಪರವಾದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಅಣಕಿಸಿದ್ದಾರೆ. ಆದರೆ, ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ನಮ್ಮದು ಪಕ್ಷಾತೀತವಾದ ಅಭಿವೃದ್ಧಿಪರ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಅವರು ನುಡಿದರು.

ಬಾಗಲಕೋಟೆ ಉಪ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಾತನಾಡಿದ ಅವರು, “ಬಿಜೆಪಿಯವರಿಗೆ ಬಡವರ, ಮಹಿಳೆಯರ ಕಷ್ಟ ಗೊತ್ತಿಲ್ಲ. ಅದಕ್ಕೇ ಅವರು ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ದಲಿತರಿಗೆ ಮೀಸಲಾತಿ ತಂದವರು ನಾವು. ಬಿಜೆಪಿ ತರಲಿಲ್ಲ. ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಬ್ರಿಟೀಷರ ಜೊತೆ ಸೇರಿದ್ದ ಬಿಜೆಪಿಯವರು ದೇಶದ ಸ್ವಾತಂತ್ರ‍್ಯಕ್ಕಾಗಿ ನಡೆದ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ. 1925 ರಲ್ಲೇ ಆರ್‌ಎಸ್‌ಎಸ್ ಸ್ಥಾಪನೆ ಆಗಿದ್ದರೂ ಬ್ರಿಟೀಷರ ವಿರುದ್ಧ ಆರ್‌ಎಸ್‌ಎಸ್ ಧ್ವನಿ ಎತ್ತಲಿಲ್ಲ. ಸ್ವಾತಂತ್ರ‍್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ. ಇದು ಕಾಂಗ್ರೆಸ್ ನ ಹೋರಾಟದ ಪರಂಪರೆ ಮತ್ತು ಕಾಂಗ್ರೆಸ್ ಪಕ್ಷದ ಇತಿಹಾಸ” ಎಂದರು.

“ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ ಬರಲಿಲ್ಲ. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೂ ಬಡವರ, ಹಿಂದುಳಿದವರ ಅಭಿವೃದ್ಧಿಗೆ ಕೆಲಸ ಮಾಡಲೇ ಇಲ್ಲ. ಮಾತೆತ್ತಿದರೆ ಡಬಲ್ ಎಂಜಿನ್ ಸರ್ಕಾರ ಎನ್ನುತ್ತಿದ್ದರು. ಆದರೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಕೃಷ್ಣ ಮೇಲ್ದಂಡೆ ಮತ್ತು ಆಲಮಟ್ಟಿ ವಿಚಾರದಲ್ಲಿ ಜನವಿರೋಧಿ ನಿಲುವು ಹೊಂದಿದ್ದರಿಂದಲೇಹದಿಮೂರು ವರ್ಷಗಳಿಂದ ಗೆಜೆಟ್ ನೋಟಿಫಿಕೇಶನ್ ಕೂಡ ಮಾಡಲಿಲ್ಲ. ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗಲೂ ಭೂ ಪರಿಹಾರ ಘೋಷಿಸಿದರೂ ಹಣ ನೀಡಲಿಲ್ಲ. ನಾನು ಮುಖ್ಯಮಂತ್ರಿಯಾಗಿ ಸಭೆ ನಡೆಸಿ ಎಕರೆ ನೀರಾವರಿ ಜಮೀನಿಗೆ 40 ಲಕ್ಷ ರೂ., ಒಣ ಭೂಮಿಗೆ 30 ಲಕ್ಷ ರೂ ಪರಿಹಾರ ಕೊಡುವ ತೀರ್ಮಾನ ಮಾಡಿ ಕೆಲಸ ಪ್ರಾರಂಭ ಮಾಡಿದ್ದು ಮೂರು ವರ್ಷದಲ್ಲಿ ಪರಿಹಾರ ಕೊಡುತ್ತೇವೆ” ಎಂದು ಭರವಸೆ ನೀಡಿದರು.

“ನಾವು ಪ್ರತೀ ವರ್ಷ 52 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯದ ಜನರ ಜೇಬಿಗೆ ಹಾಕುತ್ತಲೇ ಅಭಿವೃದ್ಧಿ ಕೆಲಸವನ್ನೂ ಮಾಡುತ್ತಿದ್ದೇವೆ. ಬಿಜೆಪಿಯವರು ಕಳ್ಳೆತ್ತುಗಳು. ಗೇಯುವ ಎತ್ತಿಗೆ ತಾನೆ ಮೇವು ಹಾಕೋದು, ಹಾಗೆಯೇ ಕೆಲಸ ಮಾಡಿದ ನಮಗೆ ಕೂಲಿ ಕೊಡಿ” ಎಂದು ವಾಗ್ದಾಳಿ ನಡೆಸಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

22 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

22 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

23 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

24 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago