ಬೆಳ್ತಂಗಡಿ, : ಏಪ್ರಿಲ್ 18 ರಂದು ಬಿಜೆಪಿ ಭದ್ರಕೋಟೆಯನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಪರಿವರ್ತಿಸುವ ಬಗ್ಗೆ ಸಂಕಲ್ಪ ಮಾಡಿದ್ದೇನೆ. ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿಶ್ವಾಸ ವ್ಯಕ್ತಪಡಿಸಿದರು.
ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಹನುಮಾನ್ ಚಾಲೀಸ ಪಠಿಸಿ ನಂತರ ಮಾತನಾಡಿದ ಅವರು, ನನ್ನ ರಾಜಕೀಯ ಗುರುವಿನ (ಡಿ.ಕೆ ಶಿವಕುಮಾರ) ಮುಂದೆ ಮಾಡುವ ಮೊದಲ ಭಾಷಣ. ಬೆಳ್ತಂಗಡಿಯನ್ನು ಬಿಜೆಪಿಯ ಭದ್ರಕೋಟೆ ಎಂದು ಹಲವರು ಹೇಳುತ್ತಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಬಿಜೆಪಿಯ ಕೋಟೆ ಕಾಂಗ್ರೆಸ್ ಕೈ ಸೇರಲಿದೆ ಎಂದು ತಿಳಿಸಿದರು.
ಬೆಳ್ತಂಗಡಿಯಿಂದಲೇ ನನ್ನ ಚುನಾವಣೆಯ ಪ್ರಚಾರ ಪ್ರಾರಂಭಿಸಿದ್ದೇನೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಜನರ ಸೇವೆಯ ಸಂಕಲ್ಪ ಮಾಡಿರುವ ನನಗೆ ಜಿಲ್ಲೆಯ ಜನತೆಯ ಹರಕೆ ನನ್ನ ಮೇಲಿದೆ ..ಇದು ನನ್ನ ಚುನಾವಣೆಯಲ್ಲ, ಕಾಂಗ್ರೆಸ್ ಪಕ್ಷದ ನಿಷ್ಠಾವಂತರ ಚುನಾವಣೆ. ಈ ಬಾರಿ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲ್ಲಲಿದೆ. ಈ ಮೂಲಕ ಬಿಜೆಪಿಯ ಕೋಟೆ ಕಾಂಗ್ರೆಸ್ ಪಕ್ಷದ ಕೈ ಸೇರುತ್ತದೆ ಎಂದು ಹೇಳಿದರು.
ಏಪ್ರಿಲ್ 18 ರಂದು ಬಿಜೆಪಿ ಭದ್ರಕೋಟೆಯನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಪರಿವರ್ತಿಸುವ ಬಗ್ಗೆ ಸಂಕಲ್ಪ ಮಾಡಿದ್ದೇನೆ. ಜಿಲ್ಲೆಯ ಜನರಿಗೆ ದಾರಿದೀಪವಾಗಿದ್ದ ವಿಜಯಾ ಬ್ಯಾಂಕ್ ವಿಲೀನವಾಗಿ ತನ್ನ ಅಸ್ತಿತ್ವ ಕಳೆದುಕೊಂಡಿದೆ. ವಿಜಯಾಬ್ಯಾಂಕ್ ಉಳಿಸುವ ಸಂಕಲ್ಪವನ್ನು ನಾವು ಕೈಗೊಳ್ಳುತ್ತೇವೆ. ಅವಕಾಶ ಸಿಕ್ಕಿದ ಮೇಲೆ ನನ್ನ ಸಂಸದೀಯ ಪಟ್ಟ ಹೋದರೂ ಪರವಾಗಿಲ್ಲ, ಶತಾಯಗತಾಯ ಹೋರಾಟ ನಡೆಸಿ ವಿಜಯಾ ಬ್ಯಾಂಕ್ ಲಾಂಛನ ಮತ್ತೆ ತರುತ್ತೇನೆ ಎಂದು ಭರವಸೆ ನೀಡಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…