Featured

ಬಿಜೆಪಿ ಭದ್ರಕೋಟೆ ಕರಾವಳಿ ಜಿಲ್ಲೆಗೆ ಅಮಿತ್ ಶಾ : ಫೆ. 11ಕ್ಕೆ ಪುತ್ತೂರಿಗೆ ಭೇಟಿ – Vishwanews24

ಬಿಜೆಪಿ ಭದ್ರಕೋಟೆ ಕರಾವಳಿ ಜಿಲ್ಲೆಗೆ ಅಮಿತ್ ಶಾ ,ಫೆ. 11ಕ್ಕೆ ಪುತ್ತೂರು, ಮಂಗಳೂರಿಗೆ ಭೇಟಿ

ಹೀಗಿದೆ ʻಸಂಚಾರ ಮಾರ್ಗ’ದ ಬದಲಾವಣೆ

ಮಂಗಳೂರು: ಪುತ್ತೂರಿನ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಲುವಾಗಿ ಕೇಂದ್ರ ಸಚಿವ ಅಮಿತ್ ಶಾ ನಾಳೆ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ ಜನರು ತಾವಾಗಿಯೇ ಗೆಲ್ಲಿಸಿಕೊಡುವಷ್ಟು ಸಾಧನೆಯನ್ನು ನಾವು ಮಾಡಿಲ್ಲ ಅನ್ನೋ ಕಟು ಸತ್ಯ ಬಿಜೆಪಿಗಗೂ ತಿಳಿದಿದೆ. ಹೀಗಾಗಿ ಪ್ರಬಲ ನಾಯಕರ ಹೆಸರಲ್ಲಿ ತನ್ನ ಭದ್ರಕೋಟೆಗಳನ್ನು ಉಳಿಸಿಕೊಳ್ಳುವ ಸಾಹಸ ಮಾಡ್ತಿರುವ ಬಿಜೆಪಿ ಕರಾವಳಿ ಜಿಲ್ಲೆಗೆ ಅಮಿತ್ ಶಾ ಭೇಟಿಗೆ ರತ್ನಗಂಬಳಿ ಹಾಸಿದೆ.

ರಾಜ್ಯ ವಿಧಾನಸಭಾ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್ ಕರ್ನಾಟಕದಲ್ಲಿ ಪ್ರಚಾರ ಕಾರ್ಯವನ್ನು ನಡೆಸುವ ಯಾವುದೇ ಸಣ್ಣ ಅವಕಾಶವೂ ತಪ್ಪಿಹೋಗಲು ಬಿಡುತ್ತಿಲ್ಲ. ಪ್ರಧಾನಿ ಮೋದಿ, ಅಮಿತ್ ಶಾ ಜಿದ್ದಿಗೆ ಬಿದ್ದವರಂತೆ ಕರ್ನಾಟಕಕ್ಕೆ ಬರುತ್ತಲೇ ಇದ್ದಾರೆ. ಹಿಂದಿನ ಭೇಟಿಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆಯಲ್ಲಿ ಕೇಸರಿ ಕಹಳೆ ಮೊಳಗಿಸಿದ್ದ ಮಾಜಿ ಬಿಜೆಪಿ ಅಧ್ಯಕ್ಷ ಹಾಗೂ ಚುನಾವಣಾ ಚಾಣಕ್ಯ ಎಂದು ಹೆಸರಾದ ಅಮಿತ್ ಶಾ ಪುತ್ತೂರು ಹಾಗೂ ಮಂಗಳೂರಿನಲ್ಲಿ ಒಂದು ದಿನದ ಪ್ರವಾಸ ನಡೆಸಲಿದ್ದು, ಅವರ ಕಾರ್ಯಕ್ರಮದ ವಿವರ ಇಲ್ಲಿದೆ:

ಅಮಿತ್ ಶಾ ಮಂಗಳೂರು ಭೇಟಿ ವೇಳಾಪಟ್ಟಿ:  ಫೆಬ್ರುವರಿ 11, ಶನಿವಾರ ಮಧ್ಯಾಹ್ನ 2.15 – ಕಣ್ಣೂರು ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಆಗಮನ. ಮಧ್ಯಾಹ್ನ 2.45 – ಕಣ್ಣೂರಿನಿಂದ ಬಿಎಸ್ಎಫ್‌ ಹೆಲಿಕಾಪ್ಟರ್‌ ಮೂಲಕ ಪುತ್ತೂರಿನ ಈಶ್ವರ ಮಂಗಲಕ್ಕೆ ಆಗಮನ. ಮಧ್ಯಾಹ್ನ 2.50 – ಈಶ್ವರಮಂಗಲ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ ಮಧ್ಯಾಹ್ನ 3.35 – ಹೆಲಿಕಾಪ್ಟರ್‌ ಮೂಲಕ ಈಶ್ವರ ಮಂಗಲದಿಂದ ಪುತ್ತೂರಿಗೆ ಆಗಮನ. ಮಧ್ಯಾಹ್ನ 3.40: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಮಾರಂಭದಲ್ಲಿ ಭಾಗಿ ಸಂಜೆ 6.00: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಆಗಮನ ಸಂಜೆ 6:15 ರಿಂದ 8:00 : ಏರ್​ಪೋರ್ಟ್ ಸಮೀಪ ಬಿಜೆಪಿ ಪ್ರಮುಖರೊಂದಿಗೆ ಆಂತರಿಕ ಸಭೆ ರಾತ್ರಿ 8:15 : ಮಂಗಳೂರು ಏರ್​ಪೋರ್ಟ್​ನಿಂದ ದೆಹಲಿಗೆ ಪ್ರಯಾಣ

ಶನಿವಾರ ಮಧ್ಯಾಹ್ನ 2:15ಕ್ಕೆ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಲ್ಲಿಂದ ಬಿಎಸ್​ಎಫ್ ಹೆಲಿಕಾಪ್ಟರ್ ಮೂಲಕ ಪುತ್ತೂರಿನ ಈಶ್ವರ ಮಂಗಲಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 2:50ಕ್ಕೆ ಈಶ್ವರ ಮಂಗಲ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಬಿಜೆಪಿ ಚಾಣಕ್ಯ ಬಳಿಕ ಹೆಲಿಕಾಪ್ಟರ್ ಮೂಲಕ ಪುತ್ತೂರಿಗೆ ಬಂದಿಳಿಯಲಿದ್ದಾರೆ. ಇಲ್ಲಿ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿರಿವ ಅಮಿತ್ ಶಾ ಸಂಜೆ ಆರು ಗಂಟೆ ವೇಳೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಲಿದ್ದಾರೆ. ಸಂಜೆ ಆರು ಹದಿನೈದರಿಂದ ರಾತ್ರಿ ಎಂಟು ಗಂಟೆಯವರೆಗೂ ಮಂಗಳೂರು ಏರ್​ಪೋರ್ಟ್ ಸಮೀಪ ಬಿಜೆಪಿ ಪ್ರಮುಖರೊಂದಿಗೆ ಅಮಿತ್ ಶಾ ಆಂತರಿಕ ಸಭೆ ನಡೆಸಲಿದ್ದಾರೆ. ಈ ಸಭೆ ಮುಕ್ತಾಯಗೊಂಡ ಬಳಿಕ ಅಮಿತ್ ಶಾ ದೆಹಲಿಗೆ ಮರಳಲಿದ್ದಾರೆ.

ಪರ್ಯಾಯ ಮಾರ್ಗಗಳು :

ಪುತ್ತೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಲಿನೆಟ್‌ ಜಂಕ್ಷನ್‌ನಿಂದ – ಮುಕ್ರಂಪಾಡಿಯವರೆಗೂ ಸದ್ರಿ ರಸ್ತೆಯಲ್ಲಿ ಫೆ. 11 ಮಧ್ಯಾಹ್ನ 2.00 ಗಂಟೆಯಿಂದ ಸಂಜೆ 5.30 ಗಂಟೆಯವರೆಗೂ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿಲ್ಲ, ಸುಗಮ ಸಂಚಾರದ ದೃಷ್ಟಿಯಿಂದ ಆ ಸಮಯದಲ್ಲಿ ಮಂಗಳೂರು ಕಡೆಯಿಂದ – ಸುಳ್ಯ ಮತ್ತು ಮಡಿಕೇರಿ ಕಡೆ ಹೋಗುವ ವಾಹನಗಳು ಲಿನೆಟ್ ಜಂಕ್ಷನ್ – ಬೊಳುವಾರು ಜಂಕ್ಷನ್ – ದರ್ಬೆ – ಪುರುಷರಕಟ್ಟೆ – ಪಂಜಳ ಪರ್ಪುಂಜ ಮಾರ್ಗವನ್ನು ಬಳಸುವುದು.

ಮಡಿಕೇರಿ – ಸುಳ್ಯ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಪರ್ಪುಂಜ – ಪಂಜಳ – ಪುರುಷರಕಟ್ಟೆ – ದರ್ಬೆ – ಬೊಳುವಾರು ಜಂಕ್ಷನ್ – ಲಿನೆಟ್ ಜಂಕ್ಷನ್ ಮಾರ್ಗವನ್ನು ಬಳಸುವುದು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago