ಬೆಂಗಳೂರು: ಬಿಜೆಪಿ ಮತದಾರರರು ಸೈಲೆಂಟ್ ಆಗಿ ಉತ್ತರ ಕೊಟ್ಟಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಇಂದು ಪಂಚರಾಜ್ಯಗಳ ಮತಎಣಿಕೆ ನಡೆಯುತ್ತಿದ್ದು, ಮಣಿಪುರ, ಉತ್ತರಪ್ರದೇಶ ಮತ್ತು ಉತ್ತರಖಂಡ ಪ್ರದೇಶದಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದೆ. ಈ ಹಿನ್ನೆಲೆ ಕಮಲದ ಸದಸ್ಯರು ಗೆಲುವಿನ ನಗೆ ಬೀರಿದ್ದಾರೆ. ತೇಜಸ್ವಿ ಸೂರ್ಯ ಟ್ವಟ್ಟರ್ನಲ್ಲಿ, ಸೈಲೆಂಟ್ ಆಗಿಯೇ ಬಿಜೆಪಿ ಮತದಾರರು ಮತದಾನ ಮಾಡುವ ಮೂಲಕ ದೊಡ್ಡ ಸಂದೇಶ ನೀಡಿದ್ದಾರೆ ಎಂದು ಸಂತೋಷವನ್ನು ಟ್ವೀಟ್ ಮಾಡಿ ಹಂಚಿಕೊಂಡಿದ್ದಾರೆ.
ಸಂತಸವನ್ನು ಹಂಚಿಕೊಂಡ ತೇಜಸ್ವಿ ಸೂರ್ಯ, ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂಬ ನಂಬಿಕೆ ಇತ್ತು. ಆದರೆ ಈ ಗೆಲುವು ಬಿಜೆಪಿ ಶ್ರಮವನ್ನು ತೋರಿಸುತ್ತೆ. ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ಮೋದಿ ಡಬಲ್ ಇಂಜಿನ್ ಸರ್ಕಾರ ನಡೆಸಿದ್ದಾರೆ. ಇವರ ಯಶಸ್ವಿ ನಡೆಗೆ ಜನರೇ ಉತ್ತರ ಕೊಟ್ಟಿದ್ದಾರೆ ಎಂದರು.
ಈ ಹಿಂದೆ ಉ.ಪ್ರದೇಶದಲ್ಲಿ ಹೆಣ್ಣು ಮಕ್ಕಳು ಹೊರಗೆ ಹೋಗಲು ಹೆದರಿಕೊಳ್ಳುತ್ತಿದ್ದರು. ಆದರೆ ಈಗ ಎಲ್ಲ ಜಾತಿ ಮಹಿಳೆಯರಿಗೂ ಬಿಜೆಪಿ ಸರ್ಕಾರ ಬಂದ ಮೇಲೆ ಧೈರ್ಯ ಬಂದಿದೆ. ಬಿಜೆಪಿ ಸರ್ಕಾರ ಅಲ್ಲಿನ ಜನರಿಗಾಗಿ ಒಳ್ಳೆಯ ಕೆಲಸವನ್ನು ಮಾಡಿದೆ. ಕೋವಿಡ್ ಸಮಯದಲ್ಲಿಯೂ ಸಹ ಅಲ್ಲಿನ ಜನರಿಗೆ ಯಾವ ರೀತಿ ಸಹಾಯ ಮಾಡಬೇಕು ಅದನ್ನು ಬಿಜೆಪಿ ಮಾಡಿದ್ದೇವೆ ಎಂದು ವಿವರಿಸಿದರು.
ಉ.ಪ್ರದೇಶ ಕಾಶಿ ವಿಶ್ವಾನಾಥ, ಇನ್ನು ಮುಂತಾದ ಪ್ರದೇಶದ ಪ್ರವಾಸಿ ಸ್ಥಳಗಳಿಗೂ ಹೆಚ್ಚು ಒತ್ತುಕೊಟ್ಟು ಕೆಲ ಮಾಡಿದ್ದಾರೆ. ಮಣಿಪುರದಲ್ಲಿ ಬಿಜೆಪಿ ಇರಲಿಲ್ಲ. ಯಾವ ರಾಜ್ಯದಲ್ಲಿ ನಮ್ಮ ಬಿಜೆಪಿ ಆಸ್ತಿತ್ವವೇ ಇರಲಿಲ್ಲವೂ, ಅದೇ ರಾಜ್ಯದಲ್ಲಿ ನಾವು ಅಧಿಕಾರಕ್ಕೆ ಬಂದಿದ್ದೇವೆ. ಅದು ಬಿಜೆಪಿ ಸಾಧನೆ. ನಾವು ಜನರ ಯಾವುದೇ ವಿಶ್ವಾಸ ಕಳೆದುಕೊಂಡಿಲ್ಲ. ಜನರಿಗೆ ಕೊಡಬೇಕಾದ ಎಲ್ಲ ಸೌಕರ್ಯಗಳನ್ನು ನಾವು ಬಿಜೆಪಿ ಮಾಡಿಕೊಟ್ಟಿದೆ ಎಂದು ತಿಳಿಸಿದರು.
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…