ಬೆಳಗಾವಿ: ‘ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಹಾಕಿರುವ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆದೇ ತೀರುತ್ತೇವೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಮ್ಮವರ ಮೇಲೆ ಹಲವೆಡೆ ಸುಳ್ಳು ಪ್ರಕರಣಗಳನ್ನು ಹಾಕಲಾಗಿದೆ. ಈಗ ನಮಗೂ ಶಕ್ತಿ ಇದೆ. ವಾಪಸ್ ತಗೊತೀವಿ’ ಎಂದರು.
‘ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮೀಸಲಾತಿ ತೆಗೆಯುತ್ತಾರೆ, ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಓಡಿಸ್ತಾರೆ ಎಂದೆಲ್ಲಾ ಕಾಂಗ್ರೆಸ್ನವರು ಹಬ್ಬಿಸಿದ್ದರು. ಎಷ್ಟು ಜನ ಮುಸ್ಲಿಮರು ಪಾಕಿಸ್ತಾನಕ್ಕೆ ಹೋದರು? ಮೀಸಲಾತಿ ಕಿತ್ತುಕೊಂಡಿದ್ದೇವೆಯೇ? ವೈದ್ಯಕೀಯ ಶಿಕ್ಷಣದಲ್ಲಿ ಇತರ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕೊಟ್ಟಿದ್ದೇವೆ. ಹಿಂದುಳಿದ ವರ್ಗದವರು ಹಾಗೂ ಪರಿಶಿಷ್ಟರಿಗೆ ಸಚಿವ ಸಂಪುಟದಲ್ಲಿ ಆದ್ಯತೆ ಸಿಕ್ಕಿದೆ’ ಎಂದು ಸಮರ್ಥಿಸಿಕೊಂಡರು.
‘ಕಾಂಗ್ರೆಸ್ ಪಕ್ಷದವರು ಏನನ್ನೂ ಮಾಡಿಲ್ಲ ಎನ್ನುವುದಿಲ್ಲ. ಆದರೆ, ರಾಜಕಾರಣಕ್ಕಾಗಿ ಬಿಜೆಪಿಯವರು ಮೀಸಲಾತಿ ವಿರೋಧಿಗಳು ಎನ್ನುವುದು ಸರಿಯೇ?’ ಎಂದು ಕೇಳಿದರು.
‘ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದಾಗ ದಲಿತ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಹೇಳಿದರು. ಪುಕ್ಸಟ್ಟೆ ಹೇಳೋಕೇನು? ಸ್ವಾತಂತ್ರ್ಯ ಬಂದಾಗಿನಿಂದ ಆಡಳಿತ ನಡೆಸಿದ ಕಾಂಗ್ರೆಸ್ನವರು ಎಷ್ಟು ಜನ ದಲಿತರನ್ನು ಮುಖ್ಯಮಂತ್ರಿ ಮಾಡಿದರು? ನಾವು ಈಗ ಕಣ್ಣು ಬಿಡುತ್ತಿದ್ದೇವೆ. ನಮಗೆ ಪೂರ್ಣ ಬಹುಮತವನ್ನು ಜನರು ಕೊಟ್ಟಿಲ್ಲ. ಅವರಿವರನ್ನು ತಗೊಂಡು ಸರ್ಕಾರ ರಚಿಸಿದ್ದೇವೆ. ಅವಕಾಶ ಬಂದಾಗ ದಲಿತ ಮುಖ್ಯಮಂತ್ರಿ ಮಾಡೇ ಮಾಡುತ್ತೇವೆ’ ಎಂದು ತಿರುಗೇಟು ನೀಡಿದರು.
‘ದಲಿತರು ನಿಮ್ಮನ್ನು (ಕಾಂಗ್ರೆಸ್ನವರನ್ನು) ಬಹಳ ವರ್ಷದಿಂದಲೂ ನಂಬಿ ಮತ ಕೊಟ್ಟರು. ಅವರೀಗ ನಿಮ್ಮಿಂದ ದೂರಾಗುತ್ತಿದ್ದಾರೆ. ಸ್ವಲ್ಪ ಮುಸ್ಲಿಮರು ಕಾಂಗ್ರೆಸ್ನವರನ್ನು ಅಂಟಿಕೊಂಡಿದ್ದಾರೆ. ಅವರೂ ಬಿಡುತ್ತಾರೆ. ಮುಂಚೆ ನಮ್ಮದು ಬ್ರಾಹ್ಮಣರ ಪಕ್ಷ ಎಂದು ಕರೆಯುತ್ತಿದ್ದರು. ಈಗ ಇಡೀ ಹಿಂದೂ ಸಮಾಜ ನಮ್ಮ ಜೊತೆಗಿದೆ’ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…