Featured

ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಹಾಕಿರುವ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆದೇ ತೀರುತ್ತೇವೆ : ಈಶ್ವರಪ್ಪ -Vishwanews24

ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಹಾಕಿರುವ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆದೇ ತೀರುತ್ತೇವೆ : ಈಶ್ವರಪ್ಪ -Vishwanews24

ಬೆಳಗಾವಿ: ‘ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಹಾಕಿರುವ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆದೇ ತೀರುತ್ತೇವೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಮ್ಮವರ ಮೇಲೆ ಹಲವೆಡೆ ಸುಳ್ಳು ಪ್ರಕರಣಗಳನ್ನು ಹಾಕಲಾಗಿದೆ. ಈಗ ನಮಗೂ ಶಕ್ತಿ ಇದೆ. ವಾಪಸ್ ತಗೊತೀವಿ’ ಎಂದರು.

‘ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮೀಸಲಾತಿ ತೆಗೆಯುತ್ತಾರೆ, ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಓಡಿಸ್ತಾರೆ ಎಂದೆಲ್ಲಾ ಕಾಂಗ್ರೆಸ್‌ನವರು ಹಬ್ಬಿಸಿದ್ದರು. ಎಷ್ಟು ಜನ ಮುಸ್ಲಿಮರು ಪಾಕಿಸ್ತಾನಕ್ಕೆ ಹೋದರು? ಮೀಸಲಾತಿ ಕಿತ್ತುಕೊಂಡಿದ್ದೇವೆಯೇ? ವೈದ್ಯಕೀಯ ಶಿಕ್ಷಣದಲ್ಲಿ ಇತರ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕೊಟ್ಟಿದ್ದೇವೆ. ಹಿಂದುಳಿದ ವರ್ಗದವರು ಹಾಗೂ ಪರಿಶಿಷ್ಟರಿಗೆ ಸಚಿವ ಸಂಪುಟದಲ್ಲಿ ಆದ್ಯತೆ ಸಿಕ್ಕಿದೆ’ ಎಂದು ಸಮರ್ಥಿಸಿಕೊಂಡರು.

‘ಕಾಂಗ್ರೆಸ್ ಪಕ್ಷದವರು ಏನನ್ನೂ ಮಾಡಿಲ್ಲ ಎನ್ನುವುದಿಲ್ಲ. ಆದರೆ, ರಾಜಕಾರಣಕ್ಕಾಗಿ ಬಿಜೆಪಿಯವರು ಮೀಸಲಾತಿ ವಿರೋಧಿಗಳು ಎನ್ನುವುದು ಸರಿಯೇ?’ ಎಂದು ಕೇಳಿದರು.

‘ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದಾಗ ದಲಿತ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಹೇಳಿದರು. ಪುಕ್ಸಟ್ಟೆ ಹೇಳೋಕೇನು? ಸ್ವಾತಂತ್ರ್ಯ ಬಂದಾಗಿನಿಂದ ಆಡಳಿತ ನಡೆಸಿದ ಕಾಂಗ್ರೆಸ್‌ನವರು ಎಷ್ಟು ಜನ ದಲಿತರನ್ನು ಮುಖ್ಯಮಂತ್ರಿ ಮಾಡಿದರು? ನಾವು ಈಗ ಕಣ್ಣು ಬಿಡುತ್ತಿದ್ದೇವೆ. ನಮಗೆ ಪೂರ್ಣ ಬಹುಮತವನ್ನು ಜನರು ಕೊಟ್ಟಿಲ್ಲ. ಅವರಿವರನ್ನು ತಗೊಂಡು ಸರ್ಕಾರ ರಚಿಸಿದ್ದೇವೆ. ಅವಕಾಶ ಬಂದಾಗ ದಲಿತ ಮುಖ್ಯಮಂತ್ರಿ ಮಾಡೇ ಮಾಡುತ್ತೇವೆ’ ಎಂದು ತಿರುಗೇಟು ನೀಡಿದರು.

‘ದಲಿತರು ನಿಮ್ಮನ್ನು (ಕಾಂಗ್ರೆಸ್‌ನವರನ್ನು) ಬಹಳ ವರ್ಷದಿಂದಲೂ ನಂಬಿ ಮತ ಕೊಟ್ಟರು. ಅವರೀಗ ನಿಮ್ಮಿಂದ ದೂರಾಗುತ್ತಿದ್ದಾರೆ. ಸ್ವಲ್ಪ ಮುಸ್ಲಿಮರು ಕಾಂಗ್ರೆಸ್‌ನವರನ್ನು ಅಂಟಿಕೊಂಡಿದ್ದಾರೆ. ಅವರೂ ಬಿಡುತ್ತಾರೆ. ಮುಂಚೆ ನಮ್ಮದು ಬ್ರಾಹ್ಮಣರ ಪಕ್ಷ ಎಂದು ಕರೆಯುತ್ತಿದ್ದರು. ಈಗ ಇಡೀ ಹಿಂದೂ ಸಮಾಜ ನಮ್ಮ ಜೊತೆಗಿದೆ’ ಎಂದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

1 hour ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago