ಬೆಳಗಾವಿ: ‘ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಹಾಕಿರುವ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆದೇ ತೀರುತ್ತೇವೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಮ್ಮವರ ಮೇಲೆ ಹಲವೆಡೆ ಸುಳ್ಳು ಪ್ರಕರಣಗಳನ್ನು ಹಾಕಲಾಗಿದೆ. ಈಗ ನಮಗೂ ಶಕ್ತಿ ಇದೆ. ವಾಪಸ್ ತಗೊತೀವಿ’ ಎಂದರು.
‘ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮೀಸಲಾತಿ ತೆಗೆಯುತ್ತಾರೆ, ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಓಡಿಸ್ತಾರೆ ಎಂದೆಲ್ಲಾ ಕಾಂಗ್ರೆಸ್ನವರು ಹಬ್ಬಿಸಿದ್ದರು. ಎಷ್ಟು ಜನ ಮುಸ್ಲಿಮರು ಪಾಕಿಸ್ತಾನಕ್ಕೆ ಹೋದರು? ಮೀಸಲಾತಿ ಕಿತ್ತುಕೊಂಡಿದ್ದೇವೆಯೇ? ವೈದ್ಯಕೀಯ ಶಿಕ್ಷಣದಲ್ಲಿ ಇತರ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕೊಟ್ಟಿದ್ದೇವೆ. ಹಿಂದುಳಿದ ವರ್ಗದವರು ಹಾಗೂ ಪರಿಶಿಷ್ಟರಿಗೆ ಸಚಿವ ಸಂಪುಟದಲ್ಲಿ ಆದ್ಯತೆ ಸಿಕ್ಕಿದೆ’ ಎಂದು ಸಮರ್ಥಿಸಿಕೊಂಡರು.
‘ಕಾಂಗ್ರೆಸ್ ಪಕ್ಷದವರು ಏನನ್ನೂ ಮಾಡಿಲ್ಲ ಎನ್ನುವುದಿಲ್ಲ. ಆದರೆ, ರಾಜಕಾರಣಕ್ಕಾಗಿ ಬಿಜೆಪಿಯವರು ಮೀಸಲಾತಿ ವಿರೋಧಿಗಳು ಎನ್ನುವುದು ಸರಿಯೇ?’ ಎಂದು ಕೇಳಿದರು.
‘ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದಾಗ ದಲಿತ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಹೇಳಿದರು. ಪುಕ್ಸಟ್ಟೆ ಹೇಳೋಕೇನು? ಸ್ವಾತಂತ್ರ್ಯ ಬಂದಾಗಿನಿಂದ ಆಡಳಿತ ನಡೆಸಿದ ಕಾಂಗ್ರೆಸ್ನವರು ಎಷ್ಟು ಜನ ದಲಿತರನ್ನು ಮುಖ್ಯಮಂತ್ರಿ ಮಾಡಿದರು? ನಾವು ಈಗ ಕಣ್ಣು ಬಿಡುತ್ತಿದ್ದೇವೆ. ನಮಗೆ ಪೂರ್ಣ ಬಹುಮತವನ್ನು ಜನರು ಕೊಟ್ಟಿಲ್ಲ. ಅವರಿವರನ್ನು ತಗೊಂಡು ಸರ್ಕಾರ ರಚಿಸಿದ್ದೇವೆ. ಅವಕಾಶ ಬಂದಾಗ ದಲಿತ ಮುಖ್ಯಮಂತ್ರಿ ಮಾಡೇ ಮಾಡುತ್ತೇವೆ’ ಎಂದು ತಿರುಗೇಟು ನೀಡಿದರು.
‘ದಲಿತರು ನಿಮ್ಮನ್ನು (ಕಾಂಗ್ರೆಸ್ನವರನ್ನು) ಬಹಳ ವರ್ಷದಿಂದಲೂ ನಂಬಿ ಮತ ಕೊಟ್ಟರು. ಅವರೀಗ ನಿಮ್ಮಿಂದ ದೂರಾಗುತ್ತಿದ್ದಾರೆ. ಸ್ವಲ್ಪ ಮುಸ್ಲಿಮರು ಕಾಂಗ್ರೆಸ್ನವರನ್ನು ಅಂಟಿಕೊಂಡಿದ್ದಾರೆ. ಅವರೂ ಬಿಡುತ್ತಾರೆ. ಮುಂಚೆ ನಮ್ಮದು ಬ್ರಾಹ್ಮಣರ ಪಕ್ಷ ಎಂದು ಕರೆಯುತ್ತಿದ್ದರು. ಈಗ ಇಡೀ ಹಿಂದೂ ಸಮಾಜ ನಮ್ಮ ಜೊತೆಗಿದೆ’ ಎಂದರು.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…