Featured

ಬಿಜೆಪಿ ಮತ್ತು ಜೆಡಿಎಸ್  ಮೈತ್ರಿಕೂಟದ ಮೂಲಕ ಯಾರನ್ನು ಮುಕ್ತ ಮಾಡುತ್ತಾರೋ ಗೊತ್ತಿಲ್ಲ : ವಿನಯ್‌ಕುಮಾರ್ ಸೊರಕೆ – Vishwanews24

ಬಿಜೆಪಿ ಮತ್ತು ಜೆಡಿಎಸ್  ಮೈತ್ರಿಕೂಟದ ಮೂಲಕ ಯಾರನ್ನು ಮುಕ್ತ ಮಾಡುತ್ತಾರೋ ಗೊತ್ತಿಲ್ಲ : ವಿನಯ್‌ಕುಮಾರ್ ಸೊರಕೆ

ರಾಯಚೂರು: ಬಿಜೆಪಿಮತ್ತು ಜೆಡಿಎಸ್  ಮೈತ್ರಿಕೂಟದ ಮೂಲಕ ಯಾರನ್ನು ಮುಕ್ತ ಮಾಡುತ್ತಾರೋ ಗೊತ್ತಿಲ್ಲ. ಜೆಡಿಎಸ್ ಅಭ್ಯರ್ಥಿಗಳು ಮೂರು ಕಡೆಯೂ ಸೋಲುತ್ತಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ್‌ಕುಮಾರ್ ಸೊರಕೆ ಹೇಳಿದ್ದಾರೆ.

ರಾಯಚೂರಿನಲ್ಲಿ  ಮಾತನಾಡಿದ ಅವರು, ಹಾಸನ, ಮಂಡ್ಯ, ಕೋಲಾರ ಅಭ್ಯರ್ಥಿ ಗೆಲ್ಲೋದು ಕಷ್ಟ. ದೇವೇಗೌಡರ ಅಳಿಯ ಬಿಜೆಪಿಯಲ್ಲಿ ನಿಂತಿದ್ದಾರೆ. ನಾಲ್ಕು ಸ್ಥಾನ ಕಳೆದುಕೊಳ್ಳುವ ಮೂಲಕ ಜೆಡಿಎಸ್ ಮುಕ್ತವಾಗುತ್ತೆ. ಆಗ ಕುಮಾರಸ್ವಾಮಿ ಜೆಡಿಎಸ್‌ಗೆ ಕೊನೆಮೊಳೆ ಹೊಡೆಯುತ್ತಾರೆ. ಜೆಡಿಎಸ್, ಬಿಜೆಪಿ ಜೊತೆ ವಿಲೀನ ಆಗೋ ಲಕ್ಷಣ ಕಾಣುತ್ತಿವೆ ಎಂದರು.

ಪ್ರಜ್ವಲ್ ರೇವಣ್ಣನನ್ನು  ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರೇ ವಿಡಿಯೋ ಕೊಟ್ಟಿದ್ದು ಎಂಬ ಮಾಹಿತಿ ನಮಗೆ ಬಂದಿದೆ. ಚಾಲಕನಿಗೆ ಯಾರಾದ್ರೂ ವಿಡಿಯೋ ಕೊಟ್ಟಿರಬೇಕಲ್ಲಾ, ಕುಮಾರಸ್ವಾಮಿ ಕೊಟ್ಟಿದ್ದಾರೆ ಅನ್ನೋ ಮಾಹಿತಿ ಬಂದಿದೆ ಎಂದು ಹೇಳಿದರು.

ಹತ್ತು ವರ್ಷದಲ್ಲಿ ಮೋದಿ ಅವರ ಸಾಧನೆ ಏನು? ಸಂತೆಯಲ್ಲಿ ಜಾನುವಾರುಗಳನ್ನು ಖರೀದಿ ಮಾಡೋ ರೀತಿ ಶಾಸಕರನ್ನ ಖರೀದಿ ಮಾಡುತ್ತಿದ್ದಾರೆ. ಗೋವಾ, ಮಹಾರಾಷ್ಟ್ರದಲ್ಲಿ ಆಯಿತು. ಐಟಿ, ಇಡಿ, ಸಿಬಿಐ ಮೂಲಕ ವಿರೋಧ ಪಕ್ಷಗಳನ್ನು ಧಮನ ಮಾಡುತ್ತಿದ್ದಾರೆ. ಹತ್ತು ವರ್ಷದಲ್ಲಿ ಸುಮಾರು 400 ಶಾಸಕರನ್ನ ಖರೀದಿ ಮಾಡಿದ್ದಾರೆ. ಚುನಾವಣೆ ವೇಳೆ ಎರಡೆರಡು ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಿದರು ಎಂದು ಕಿಡಿಕಾರಿದರು.

ಬಿಜೆಪಿ ಆಡಳಿತದಲ್ಲಿ ಬಡತನ, ಬೆಲೆ ಏರಿಕೆ, ನಿರುದ್ಯೋಗ ಕಾಣುತ್ತಿವೆ. ನೋಟು ಬ್ಯಾನ್, ಜಿಎಸ್‌ಟಿ ಮೂಲಕ ಅನಾನುಕೂಲ ಆಯಿತೇ ಹೊರತು ಪ್ರಯೋಜನವಾಗಿಲ್ಲ. ನೀರಾವರಿ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯಕ್ಕೆ ಬರ ಪರಿಹಾರವನ್ನು ಸರಿಯಾಗಿ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

19 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

19 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

19 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

19 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

20 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

20 hours ago