ರಾಯಚೂರು: ಬಿಜೆಪಿಮತ್ತು ಜೆಡಿಎಸ್ ಮೈತ್ರಿಕೂಟದ ಮೂಲಕ ಯಾರನ್ನು ಮುಕ್ತ ಮಾಡುತ್ತಾರೋ ಗೊತ್ತಿಲ್ಲ. ಜೆಡಿಎಸ್ ಅಭ್ಯರ್ಥಿಗಳು ಮೂರು ಕಡೆಯೂ ಸೋಲುತ್ತಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ್ಕುಮಾರ್ ಸೊರಕೆ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಅವರು, ಹಾಸನ, ಮಂಡ್ಯ, ಕೋಲಾರ ಅಭ್ಯರ್ಥಿ ಗೆಲ್ಲೋದು ಕಷ್ಟ. ದೇವೇಗೌಡರ ಅಳಿಯ ಬಿಜೆಪಿಯಲ್ಲಿ ನಿಂತಿದ್ದಾರೆ. ನಾಲ್ಕು ಸ್ಥಾನ ಕಳೆದುಕೊಳ್ಳುವ ಮೂಲಕ ಜೆಡಿಎಸ್ ಮುಕ್ತವಾಗುತ್ತೆ. ಆಗ ಕುಮಾರಸ್ವಾಮಿ ಜೆಡಿಎಸ್ಗೆ ಕೊನೆಮೊಳೆ ಹೊಡೆಯುತ್ತಾರೆ. ಜೆಡಿಎಸ್, ಬಿಜೆಪಿ ಜೊತೆ ವಿಲೀನ ಆಗೋ ಲಕ್ಷಣ ಕಾಣುತ್ತಿವೆ ಎಂದರು.
ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರೇ ವಿಡಿಯೋ ಕೊಟ್ಟಿದ್ದು ಎಂಬ ಮಾಹಿತಿ ನಮಗೆ ಬಂದಿದೆ. ಚಾಲಕನಿಗೆ ಯಾರಾದ್ರೂ ವಿಡಿಯೋ ಕೊಟ್ಟಿರಬೇಕಲ್ಲಾ, ಕುಮಾರಸ್ವಾಮಿ ಕೊಟ್ಟಿದ್ದಾರೆ ಅನ್ನೋ ಮಾಹಿತಿ ಬಂದಿದೆ ಎಂದು ಹೇಳಿದರು.
ಹತ್ತು ವರ್ಷದಲ್ಲಿ ಮೋದಿ ಅವರ ಸಾಧನೆ ಏನು? ಸಂತೆಯಲ್ಲಿ ಜಾನುವಾರುಗಳನ್ನು ಖರೀದಿ ಮಾಡೋ ರೀತಿ ಶಾಸಕರನ್ನ ಖರೀದಿ ಮಾಡುತ್ತಿದ್ದಾರೆ. ಗೋವಾ, ಮಹಾರಾಷ್ಟ್ರದಲ್ಲಿ ಆಯಿತು. ಐಟಿ, ಇಡಿ, ಸಿಬಿಐ ಮೂಲಕ ವಿರೋಧ ಪಕ್ಷಗಳನ್ನು ಧಮನ ಮಾಡುತ್ತಿದ್ದಾರೆ. ಹತ್ತು ವರ್ಷದಲ್ಲಿ ಸುಮಾರು 400 ಶಾಸಕರನ್ನ ಖರೀದಿ ಮಾಡಿದ್ದಾರೆ. ಚುನಾವಣೆ ವೇಳೆ ಎರಡೆರಡು ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಿದರು ಎಂದು ಕಿಡಿಕಾರಿದರು.
ಬಿಜೆಪಿ ಆಡಳಿತದಲ್ಲಿ ಬಡತನ, ಬೆಲೆ ಏರಿಕೆ, ನಿರುದ್ಯೋಗ ಕಾಣುತ್ತಿವೆ. ನೋಟು ಬ್ಯಾನ್, ಜಿಎಸ್ಟಿ ಮೂಲಕ ಅನಾನುಕೂಲ ಆಯಿತೇ ಹೊರತು ಪ್ರಯೋಜನವಾಗಿಲ್ಲ. ನೀರಾವರಿ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯಕ್ಕೆ ಬರ ಪರಿಹಾರವನ್ನು ಸರಿಯಾಗಿ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…