ಬೆಂಗಳೂರು: ಕಾಂಗ್ರೆಸ್ ಮುಕ್ತ ಭಾರತ ಅನ್ನೋದು ಬಿಜೆಪಿ ವಾದ. ಆದರೆ ಬಿಜೆಪಿ ಮುಕ್ತ ಮಾಡುವುದೇ ನಮ್ಮ ಗುರಿ ಎಂದು ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ. ಬಿಜೆಪಿಗಿಂತ ಮತಗಳಿಕೆಯಲ್ಲಿ ಕಾಂಗ್ರೆಸ್ ಶೇ 2ರಷ್ಟು ಹೆಚ್ಚಿದೆ. ಮುಂದೆ ಒಂದೊಂದು ಬೂತ್ ನಮಗೆ ಬಹಳ ಮುಖ್ಯ. ಹೀಗಾಗಿ ಪ್ರತಿ ಬೂತ್ಗೂ ಹೆಚ್ಚಿನ ಒತ್ತು ನೀಡಬೇಕಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ನಾವು ವೀಕ್ ಇದ್ದೇವೆ. ಮೈಕ್ರೋಮ್ಯಾನೇಜ್ ಮೆಂಟ್ನಂತೆ ಬೂತ್ಗೆ ಒತ್ತು ನೀಡಬೇಕು. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರನ್ನ ಒಟ್ಟುಗೂಡಿಸಬೇಕಿದೆ. ಈ ನಿಟ್ಟಿನಲ್ಲಿ ಶಕ್ತಿ ಯೋಜನೆ ಸಹಾಯಕಾರಿಯಾಗಲಿದೆ ಎಂದು ಅವರು ತಿಳಿಸಿದ್ರು.
ಶಕ್ತಿ ಯೋಜನೆ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ ಶಕ್ತಿ ಯೋಜನೆ ಕಾರ್ಯಕ್ರಮದ ಬಗ್ಗೆ ಮಾತನಾಡಿ, ಬೂತ್ ಮಟ್ಟದಲ್ಲಿ ಕಾರ್ಯಕರ್ತರ ನೋಂದಣಿ ಹಾಗೂ ಜನ ಸಂಪರ್ಕಕ್ಕಾಗಿ ಶಕ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಮ್ಮೆ ನೊಂದಾಯಿಸಿಕೊಂಡರೆ ಎಐಸಿಸಿಯಿಂದ ಕಾಂಗ್ರೆಸ್ ಕಾರ್ಯಕ್ರಮಗಳ ವಿವರ ಲಭ್ಯವಾಗುತ್ತದೆ. ಬಳಿಕ ರಾಹುಲ್ ಗಾಂಧಿ ಅವರ ಧ್ವನಿ ಮುದ್ರಿತ ಕರೆ ಕಾರ್ಯಕರ್ತರಿಗ ಬರುತ್ತೆ. ಶಕ್ತಿಯೋಜನೆಯಿಂದ ತಳ ಮಟ್ಟದ ಸಂಘಟನೆ ಬಗ್ಗೆ ಖಚಿತ ವಿವರ ಲಭ್ಯವಾಗಲಿದ್ದು, ಇದರ ಸಂಪೂರ್ಣ ವಿವರವನ್ನ ಎಐಸಿಸಿ ನೇರವಾಗಿ ರಾಜ್ಯ ಘಟಕಗಳಿಗೆ ನೀಡಲಿದೆ ಎಂದರು.
ಈ ವೇಳೆ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಉಪಸ್ಥಿತರಿದ್ದರು.
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…
ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ; ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…