ಬೆಂಗಳೂರು: ಕಾಂಗ್ರೆಸ್ ಮುಕ್ತ ಭಾರತ ಅನ್ನೋದು ಬಿಜೆಪಿ ವಾದ. ಆದರೆ ಬಿಜೆಪಿ ಮುಕ್ತ ಮಾಡುವುದೇ ನಮ್ಮ ಗುರಿ ಎಂದು ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ. ಬಿಜೆಪಿಗಿಂತ ಮತಗಳಿಕೆಯಲ್ಲಿ ಕಾಂಗ್ರೆಸ್ ಶೇ 2ರಷ್ಟು ಹೆಚ್ಚಿದೆ. ಮುಂದೆ ಒಂದೊಂದು ಬೂತ್ ನಮಗೆ ಬಹಳ ಮುಖ್ಯ. ಹೀಗಾಗಿ ಪ್ರತಿ ಬೂತ್ಗೂ ಹೆಚ್ಚಿನ ಒತ್ತು ನೀಡಬೇಕಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ನಾವು ವೀಕ್ ಇದ್ದೇವೆ. ಮೈಕ್ರೋಮ್ಯಾನೇಜ್ ಮೆಂಟ್ನಂತೆ ಬೂತ್ಗೆ ಒತ್ತು ನೀಡಬೇಕು. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರನ್ನ ಒಟ್ಟುಗೂಡಿಸಬೇಕಿದೆ. ಈ ನಿಟ್ಟಿನಲ್ಲಿ ಶಕ್ತಿ ಯೋಜನೆ ಸಹಾಯಕಾರಿಯಾಗಲಿದೆ ಎಂದು ಅವರು ತಿಳಿಸಿದ್ರು.
ಶಕ್ತಿ ಯೋಜನೆ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ ಶಕ್ತಿ ಯೋಜನೆ ಕಾರ್ಯಕ್ರಮದ ಬಗ್ಗೆ ಮಾತನಾಡಿ, ಬೂತ್ ಮಟ್ಟದಲ್ಲಿ ಕಾರ್ಯಕರ್ತರ ನೋಂದಣಿ ಹಾಗೂ ಜನ ಸಂಪರ್ಕಕ್ಕಾಗಿ ಶಕ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಮ್ಮೆ ನೊಂದಾಯಿಸಿಕೊಂಡರೆ ಎಐಸಿಸಿಯಿಂದ ಕಾಂಗ್ರೆಸ್ ಕಾರ್ಯಕ್ರಮಗಳ ವಿವರ ಲಭ್ಯವಾಗುತ್ತದೆ. ಬಳಿಕ ರಾಹುಲ್ ಗಾಂಧಿ ಅವರ ಧ್ವನಿ ಮುದ್ರಿತ ಕರೆ ಕಾರ್ಯಕರ್ತರಿಗ ಬರುತ್ತೆ. ಶಕ್ತಿಯೋಜನೆಯಿಂದ ತಳ ಮಟ್ಟದ ಸಂಘಟನೆ ಬಗ್ಗೆ ಖಚಿತ ವಿವರ ಲಭ್ಯವಾಗಲಿದ್ದು, ಇದರ ಸಂಪೂರ್ಣ ವಿವರವನ್ನ ಎಐಸಿಸಿ ನೇರವಾಗಿ ರಾಜ್ಯ ಘಟಕಗಳಿಗೆ ನೀಡಲಿದೆ ಎಂದರು.
ಈ ವೇಳೆ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಉಪಸ್ಥಿತರಿದ್ದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]