ಕೋಲ್ಕತ್ತಾ: ಶನಿವಾರ ಪೂರ್ಣಗೊಂಡ ಮೊದಲ ಹಂತದ ಚುನಾವಣೆಯಲ್ಲಿ 30 ಸೀಟುಗಳ ಪೈಕಿ 26 ಸೀಟುಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಗೆ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದು, “ಬಿಜೆಪಿ ಮೊದಲ ಹಂತದ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಲಿದೆ” ಎಂದಿದ್ದಾರೆ.
ಚಂಡೀಪುರ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ಸಂದರ್ಭ ಮಾತನಾಡಿದ ಅವರು, “30ಕ್ಕೆ 30 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಏಕೆ ಹೇಳುತ್ತಿಲ್ಲ. ಹಾಗಾದರೆ ಉಳಿದ ಸೀಟುಗಳನ್ನು ಕಾಂಗ್ರೆಸ್ ಹಾಗೂ ಸಿಪಿಐಎಂಗೆ ಬಿಟ್ಟಿದ್ದಾರಾ?” ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : ಅನಾರೋಗ್ಯದ ಹಿನ್ನೆಲೆ ಶರದ್ ಪವಾರ್ ಆಸ್ಪತ್ರೆಗೆ ದಾಖಲು -Vishwanews24
ಈ ವೇಳೆ ಕೇಂದ್ರ ಪಡೆಗಳನ್ನು ಒತ್ತಾಯಿಸಿದ ಅವರು, “ಚುನಾವಣೆಗಳಲ್ಲಿ ಮುಕ್ತ ಹಾಗೂ ಪ್ರಜಾಪ್ರಭುತ್ವದ ಮತದಾನವನ್ನು ನಡೆಸಬೇಕು” ಎಂದಿದ್ದಾರೆ.
ಕಾಂಗ್ರೆಸ್ನ ಹಿರಿಯ ನಾಯಕ ಡೆರೆಕ್ ಓಬ್ರಿಯನ್ ಅವರು ಮಮತಾಗೆ ಬೆಂಬಲ ನೀಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು “ಸುಳ್ಳುಗಾರ” ಎಂದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯು ಎಂಟು ಹಂತಗಳಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಹಂತದ ಚುನಾವಣೆ ಮುಗಿದಿದ್ದು, ಇನ್ನು ಏಳು ಹಂತದ ಚುನಾವಣೆ ಬಾಕಿ ಇದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…