ಕೋಲ್ಕತ್ತಾ: ಶನಿವಾರ ಪೂರ್ಣಗೊಂಡ ಮೊದಲ ಹಂತದ ಚುನಾವಣೆಯಲ್ಲಿ 30 ಸೀಟುಗಳ ಪೈಕಿ 26 ಸೀಟುಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಗೆ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದು, “ಬಿಜೆಪಿ ಮೊದಲ ಹಂತದ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಲಿದೆ” ಎಂದಿದ್ದಾರೆ.
ಚಂಡೀಪುರ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ಸಂದರ್ಭ ಮಾತನಾಡಿದ ಅವರು, “30ಕ್ಕೆ 30 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಏಕೆ ಹೇಳುತ್ತಿಲ್ಲ. ಹಾಗಾದರೆ ಉಳಿದ ಸೀಟುಗಳನ್ನು ಕಾಂಗ್ರೆಸ್ ಹಾಗೂ ಸಿಪಿಐಎಂಗೆ ಬಿಟ್ಟಿದ್ದಾರಾ?” ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : ಅನಾರೋಗ್ಯದ ಹಿನ್ನೆಲೆ ಶರದ್ ಪವಾರ್ ಆಸ್ಪತ್ರೆಗೆ ದಾಖಲು -Vishwanews24
ಈ ವೇಳೆ ಕೇಂದ್ರ ಪಡೆಗಳನ್ನು ಒತ್ತಾಯಿಸಿದ ಅವರು, “ಚುನಾವಣೆಗಳಲ್ಲಿ ಮುಕ್ತ ಹಾಗೂ ಪ್ರಜಾಪ್ರಭುತ್ವದ ಮತದಾನವನ್ನು ನಡೆಸಬೇಕು” ಎಂದಿದ್ದಾರೆ.
ಕಾಂಗ್ರೆಸ್ನ ಹಿರಿಯ ನಾಯಕ ಡೆರೆಕ್ ಓಬ್ರಿಯನ್ ಅವರು ಮಮತಾಗೆ ಬೆಂಬಲ ನೀಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು “ಸುಳ್ಳುಗಾರ” ಎಂದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯು ಎಂಟು ಹಂತಗಳಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಹಂತದ ಚುನಾವಣೆ ಮುಗಿದಿದ್ದು, ಇನ್ನು ಏಳು ಹಂತದ ಚುನಾವಣೆ ಬಾಕಿ ಇದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…