ಬೆಂಗಳೂರು: ಬಿಜೆಪಿಯ ಕರ್ನಾಟಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿರುವ ಬಗ್ಗೆ ಬಳ್ಳಾರಿಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಯ ಸೋಲಿನ ಹೊಣೆ ಹೊತ್ತು ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಈ ಬಗ್ಗೆ ಪಕ್ಷದ ನಾಯಕರಿಗೆ ಮೌಖಿಕವಾಗಿ ಮತ್ತು ಲಿಖಿತವಾಗಿ ತಿಳಿಸಿದ್ದೆ ಎಂದು ಕಟೀಲ್ ಹೇಳಿದ್ದರು.
ವಿಧಾನಸಭೆ ಸೋಲಿನ ಬಳಿಕ ಕಟೀಲ್ ಅವರ ರಾಜೀನಾಮೆಗೆ ರಾಜ್ಯದ ಅನೇಕ ಕಡೆಗಳಲ್ಲಿ ಪಕ್ಷದ ಕಾರ್ಯಕರ್ತರಿಂದ ಆಗ್ರಹ ವ್ಯಕ್ತವಾಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿಯೂ ಈ ಬಗ್ಗೆ ತರಹೇವಾರಿ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಆದರೆ, ಪಕ್ಷದ ವರಿಷ್ಠರು ಹಾಗೂ ಇತರ ನಾಯಕರು ನಳಿನ್ ಅವರನ್ನು ಸಮರ್ಥಿಸಿ ಹೇಳಿಕೆಗಳನ್ನು ನೀಡಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…