Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಬೆಂಗಳೂರು: ಬಿಜೆಪಿ ವಿರುದ್ದ ಹನುಮ ಜಯಂತಿ ದಿನದಿಂದಲೇ ಹೋರಾಟ ಆರಂಭಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಜೆಡಿಎಸ್ ಜನರಿಗೆ ಯಾಕೆ ಬೇಕು ಎಂಬುದನ್ನು 2023ಕ್ಕೆ ನಿರ್ಣಯಿಸಲಿದ್ದಾರೆ. ಬಿಜೆಪಿ ಆಡಳಿತದಿಂದಾಗಿ ರಾಜ್ಯಕ್ಕೆ ಹಲವು ಅನ್ಯಾಯವಾಗಿದ್ದು, ಇದಕ್ಕಾಗಿ ಮಿಷನ್ 123 ರೋಡ್ ಮ್ಯಾಪ್ ಮಾಡಿದ್ದೇವೆ. ರೈತರ ಹೊಲಕ್ಕೆ ನೀರು ನೀಡುವ ಭರವಸೆಯೊಂದಿಗೆ ಹೋರಾಟ ಪ್ರಾರಂಭಿಸಲಾಗುವುದು ಎಂದರು.
ಹಿಜಾಬ್, ಹಲಾಲ್ ವಿವಾದ ಎಬ್ಬಿಸಿ ಭಾವನಾತ್ಮಕ ವಿಚಾರ ಮುಂದಿಟ್ಟುಕೊಂಡು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಪ್ರತಿಭಟಿಸಲು ಕಾಂಗ್ರೆಸ್ಸಿಗರಿಗೆ ಧ್ವನಿಯೇ ಇಲ್ಲದಂತಾಗಿದೆ. ಹೀಗಾಗಿ ನಾವೇ ಇದರ ವಿರುದ್ಧ ನಿಲ್ಲುವುದು ಅಗತ್ಯವಾಗಿದೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ ನ್ಯಾಯಪರವಾಗಿ ಇರುತ್ತೇವೆ ಎಂದವರು ತಿಳಿಸಿದರು.
ಕಾಶ್ಮೀರಿ ಫೈಲ್ಗೆ ಶೇ.100ರಷ್ಟು ತೆರಿಗೆ ವಿನಾಯಿತಿ ನೀಡಿದಂತೆ ಸಚಿವರ ಕೊಠಡಿಯಲ್ಲಿರುವ ಕಡತಗಳಿಗೆ ಶೇ.100ರಷ್ಟು ರಿಯಾಯಿತಿ ಕೊಟ್ಟರೆ ರಾಜ್ಯದ ಭವಿಷ್ಯ ಚೆನ್ನಾಗಿರಲಿದೆ. ಇಂಧನ ಬೆಲೆ, ಸಿಮೆಂಟ್, ಕಬ್ಬಿಣ, ಅಡುಗೆ ಅನಿಲದ ಬೆಲೆ ಏರಿಕೆಯಿಂದಾಗಿ ಬಡವರ ಬದುಕು ಸಂಕಷ್ಟದೆಡೆಗೆ ಸಾಗಿದೆ. ಇದರ ವಿರುದ್ದ ಹೋರಾಡುವುದಕ್ಕೆ ವಿಶ್ವಹಿಂದು ಪರಿಷತ್ ಮುಂದಾಗಲಿ ಎಂದು ಇದೇ ವೇಳೆ ಅವರು ವಾಗ್ದಾಳಿ ನಡೆಸಿದರು.
ವಿಧಾನಪರಿಷತ್ ಸದಸ್ಯ ರಮೇಶ್ ಗೌಡ, ವಿಧಾನಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ, ಮಾಜಿ ಶಾಸಕ ವೆಂಕಟಶಿವಾರೆಡ್ಡಿ, ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಪಕ್ಷದ ಮುಖಂಡರಾದ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…