ಬಿಜೆಪಿ ವಿರುದ್ಧ ಧ್ವನಿ ಎತ್ತುವಂತೆ ದೇಶದ ಜನತೆಗೆ ಕರೆ : ಮಮತಾ ಬ್ಯಾನರ್ಜಿ -Vishwanews24
ಕೋಲ್ಕತಾ: ಬಿಜೆಪಿ ವಿರುದ್ಧ ಧ್ವನಿ ಎತ್ತುವಂತೆ ದೇಶದ ಜನತೆಗೆ ಕರೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇಸರಿ ಪಕ್ಷ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಲೋಕ ಸಮರದಲ್ಲಿ ಸೋಲು ಅನುಭವಿಸಿದ ನಂತರ ಮೊದಲ ಬಾರಿ ಮಾತನಾಡಿದ ದೀದಿ ಬಿಜೆಪಿ ರಾಜ್ಯದಲ್ಲಿ ಬೆಂಗಾಲಿ ಮತ್ತು ಬೆಂಗಾಲಿಯೇತರರನ್ನು ವಿಭಜಿಸಲು ಯತ್ನಿಸುತ್ತಿದ್ದು, ಈ ಮೂಲಕ ಕೋಮುಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಬಿಜೆಪಿಯಂತಹ ಪಕ್ಷವನ್ನು ನಾನು ದ್ವೇಷಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಟಿಎಂಸಿ ಆಯೋಜಿಸಿದ್ದ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ದೀದಿ, ಬಿಜೆಪಿ ಗೂಂಡಾಗಳು 400ಕ್ಕೂ ಹೆಚ್ಚು ಬೆಂಗಾಲಿಗಳ ಕುಟುಂಬವನ್ನು ನಿರಾಶ್ರಿತರನ್ನಾಗಿ ಮಾಡಿದ್ದಾರೆ.
ಬಿಜೆಪಿ ಗೂಂಡಾಗಳಿಗೆ ತಾವು ಹೆದರುವುದಿಲ್ಲ ಎಂದರು.
