Featured

ಬಿಜೆಪಿ ವಿರುದ್ಧ ಹೋರಾಡಲು ನಾವೆಲ್ಲರೂ ಒಗ್ಗೂಡಬೇಕೆಂದು ನಾನು ಭಾವಿಸುತ್ತೇನೆ :ಮಮತಾ ಬ್ಯಾನರ್ಜಿ -Vishwanews24

ಕೋಲ್ಕತಾ,: ಭಾರತೀಯ ಜನತಾ ಪಕ್ಷವನ್ನು ಸೋಲಿಸಲು ಕಾಂಗ್ರೆಸ್, ಸಿಪಿಎಂ ಹಾಗೂ ಟಿಎಂಸಿ ಪರಸ್ಪರ ಕೈಜೋಡಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಕರೆ ನೀಡಿದ್ದಾರೆ.

ರಾಜ್ಯ ವಿಧಾನಸಭಾ ಕಲಾಪದ ವೇಳೆ ಮಾತನಾಡುತ್ತಿದ್ದ ಅವರು, ಬಿಜೆಪಿಗೆ ಮತ ನೀಡಿದಲ್ಲಿ ಏನೇನಾಗುತ್ತದೆ ಎಂಬುದನ್ನು ಉತ್ತರ 24 ಪರಗಣ ಜಿಲ್ಲೆಯ ಭಟ್‌ಪಾರಾ ನಗರದ ಜನತೆ ಕಾಣುತ್ತಿದ್ದಾರೆ ಎಂದರು.

” ಬಿಜೆಪಿ ವಿರುದ್ಧ ಹೋರಾಡಲು ನಾವೆಲ್ಲರೂ (ಟಿಎಂಸಿ,ಕಾಂಗ್ರೆಸ್ ಹಾಗೂ ಸಿಪಿಎಂ) ಒಗ್ಗೂಡಬೇಕೆಂದು ನಾನು ಭಾವಿಸುತ್ತೇನೆ. ಇದಕ್ಕಾಗಿ ನಾವು ರಾಜಕೀಯವಾಗಿ ಕೈಜೋಡಿಸಬೇಕೆಂದು ಅರ್ಥವಲ್ಲ. ಆದರೆ ರಾಷ್ಟ್ರೀಯ ಮಟ್ಟದ ಸಾಮಾನ್ಯ ವಿಷಯಗಳ ವಿಚಾರವಾಗಿ ನಾವು ಒಟ್ಟಾಗಬಹುದಾಗಿದೆ” ಎಂದವರು ಹೇಳಿದ್ದಾರೆ.

ಪಶ್ಚಿಮಬಂಗಾಳದಲ್ಲಿ ಪ್ರತಿಭಟನೆಯ ಬಿರುಗಾಳಿಯನ್ನು ಎಬ್ಬಿಸಿರುವ ‘ಕಟ್ ಮನಿ’ (ಲಂಚ) ವಿವಾದದ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಿದ ಮಮತಾ ಪಕ್ಷದ ಕಾರ್ಯಕರ್ತರನ್ನು ಶಿಸ್ತಿನಲ್ಲಿರಿಸಲು ಯತ್ನಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದರು.ಆದರೆ ಪುರಾವೆಗಳಿಲ್ಲದೆ ಯಾರ ವಿರುದ್ಧ ಕಳಂಕ ಹೊರಿಸಲು ಸಾಧ್ಯವಿಲ್ಲ ಎಂದರು.

ಟಿಎಂಸಿಯ ಚುನಾಯಿತ ಪ್ರತಿನಿಧಿಗಳು ಫಲಾನುಭವಿಗಳಿಂದ ಕಟ್ ಮನಿ ಸ್ವೀಕರಿಸಬಾರದೆಂದು ಮಮತಾ ಭಾಷಣವೊಂದರಲ್ಲಿ ತಿಳಿಸಿದ್ದಾರೆ. ಅವರ ಈ ಹೇಳಿಕೆಯನ್ನು ಬಿಜೆಪಿ ಅಸ್ತ್ರವಾಗಿ ಬಳಸಿಕೊಂಡು ರಾಜ್ಯಾದ್ಯಂತ ಚಳವಳಿ ನಡೆಸುತ್ತಿದೆ.

ಆಡಳಿತಾರೂಢ ಟಿಎಂಸಿ ಪಕ್ಷದ ಚುನಾಯಿತ ಪ್ರತಿನಿಧಿಗಳು ಸರಕಾರ ವಿವಿಧ ಯೋಜನೆಗಳ ಫಲಾನುಭವಿಗಳಿಂದ ತೆಗೆದುಕೊಳ್ಳುತ್ತಿದ್ದಾರೆನ್ನಲಾದ ಕಟ್ ಮನಿ (ಲಂಚ)ಯನ್ನು ಹಿಂದಿರುಗಿಸುವಂತೆ ಆಗ್ರಹಿಸಿ ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಬಿಜೆಪಿಯು ಪ್ರತಿಭಟನೆ ಹಾಗೂ ಧರಣಿಗಳನ್ನು ನಡೆಸುತ್ತಿದೆ.

ಸದನದಲ್ಲಿ ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಮಮತಾ ಅವರು ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಅಪರಿಚಿತವಾದ ಸಂಸ್ಕೃತಿಯೊಂದನ್ನು ತರಲು ಪ್ರಯತ್ನಿಸುತ್ತಿರುವುದಾಗಿ ಆರೋಪಿಸಿದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago