Featured

ಬಿಜೆಪಿ ವಿರುದ್ಧ ಹೋರಾಡಲು ನಾವೆಲ್ಲರೂ ಒಗ್ಗೂಡಬೇಕೆಂದು ನಾನು ಭಾವಿಸುತ್ತೇನೆ :ಮಮತಾ ಬ್ಯಾನರ್ಜಿ -Vishwanews24

ಕೋಲ್ಕತಾ,: ಭಾರತೀಯ ಜನತಾ ಪಕ್ಷವನ್ನು ಸೋಲಿಸಲು ಕಾಂಗ್ರೆಸ್, ಸಿಪಿಎಂ ಹಾಗೂ ಟಿಎಂಸಿ ಪರಸ್ಪರ ಕೈಜೋಡಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಕರೆ ನೀಡಿದ್ದಾರೆ.

ರಾಜ್ಯ ವಿಧಾನಸಭಾ ಕಲಾಪದ ವೇಳೆ ಮಾತನಾಡುತ್ತಿದ್ದ ಅವರು, ಬಿಜೆಪಿಗೆ ಮತ ನೀಡಿದಲ್ಲಿ ಏನೇನಾಗುತ್ತದೆ ಎಂಬುದನ್ನು ಉತ್ತರ 24 ಪರಗಣ ಜಿಲ್ಲೆಯ ಭಟ್‌ಪಾರಾ ನಗರದ ಜನತೆ ಕಾಣುತ್ತಿದ್ದಾರೆ ಎಂದರು.

” ಬಿಜೆಪಿ ವಿರುದ್ಧ ಹೋರಾಡಲು ನಾವೆಲ್ಲರೂ (ಟಿಎಂಸಿ,ಕಾಂಗ್ರೆಸ್ ಹಾಗೂ ಸಿಪಿಎಂ) ಒಗ್ಗೂಡಬೇಕೆಂದು ನಾನು ಭಾವಿಸುತ್ತೇನೆ. ಇದಕ್ಕಾಗಿ ನಾವು ರಾಜಕೀಯವಾಗಿ ಕೈಜೋಡಿಸಬೇಕೆಂದು ಅರ್ಥವಲ್ಲ. ಆದರೆ ರಾಷ್ಟ್ರೀಯ ಮಟ್ಟದ ಸಾಮಾನ್ಯ ವಿಷಯಗಳ ವಿಚಾರವಾಗಿ ನಾವು ಒಟ್ಟಾಗಬಹುದಾಗಿದೆ” ಎಂದವರು ಹೇಳಿದ್ದಾರೆ.

ಪಶ್ಚಿಮಬಂಗಾಳದಲ್ಲಿ ಪ್ರತಿಭಟನೆಯ ಬಿರುಗಾಳಿಯನ್ನು ಎಬ್ಬಿಸಿರುವ ‘ಕಟ್ ಮನಿ’ (ಲಂಚ) ವಿವಾದದ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಿದ ಮಮತಾ ಪಕ್ಷದ ಕಾರ್ಯಕರ್ತರನ್ನು ಶಿಸ್ತಿನಲ್ಲಿರಿಸಲು ಯತ್ನಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದರು.ಆದರೆ ಪುರಾವೆಗಳಿಲ್ಲದೆ ಯಾರ ವಿರುದ್ಧ ಕಳಂಕ ಹೊರಿಸಲು ಸಾಧ್ಯವಿಲ್ಲ ಎಂದರು.

ಟಿಎಂಸಿಯ ಚುನಾಯಿತ ಪ್ರತಿನಿಧಿಗಳು ಫಲಾನುಭವಿಗಳಿಂದ ಕಟ್ ಮನಿ ಸ್ವೀಕರಿಸಬಾರದೆಂದು ಮಮತಾ ಭಾಷಣವೊಂದರಲ್ಲಿ ತಿಳಿಸಿದ್ದಾರೆ. ಅವರ ಈ ಹೇಳಿಕೆಯನ್ನು ಬಿಜೆಪಿ ಅಸ್ತ್ರವಾಗಿ ಬಳಸಿಕೊಂಡು ರಾಜ್ಯಾದ್ಯಂತ ಚಳವಳಿ ನಡೆಸುತ್ತಿದೆ.

ಆಡಳಿತಾರೂಢ ಟಿಎಂಸಿ ಪಕ್ಷದ ಚುನಾಯಿತ ಪ್ರತಿನಿಧಿಗಳು ಸರಕಾರ ವಿವಿಧ ಯೋಜನೆಗಳ ಫಲಾನುಭವಿಗಳಿಂದ ತೆಗೆದುಕೊಳ್ಳುತ್ತಿದ್ದಾರೆನ್ನಲಾದ ಕಟ್ ಮನಿ (ಲಂಚ)ಯನ್ನು ಹಿಂದಿರುಗಿಸುವಂತೆ ಆಗ್ರಹಿಸಿ ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಬಿಜೆಪಿಯು ಪ್ರತಿಭಟನೆ ಹಾಗೂ ಧರಣಿಗಳನ್ನು ನಡೆಸುತ್ತಿದೆ.

ಸದನದಲ್ಲಿ ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಮಮತಾ ಅವರು ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಅಪರಿಚಿತವಾದ ಸಂಸ್ಕೃತಿಯೊಂದನ್ನು ತರಲು ಪ್ರಯತ್ನಿಸುತ್ತಿರುವುದಾಗಿ ಆರೋಪಿಸಿದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago