ರಾಜ್ಯ ನ್ಯೂಸ್

ಬಿಜೆಪಿ ಶಾಸಕರನ್ನು ಮುಟ್ಟಿ ನೋಡೋಣ. ಅವರು ಸಿಂಹಗಳಿದ್ದಂತೆ, : ಕೆ.ಎಸ್‌. ಈಶ್ವರಪ್ಪ

ಮೈಸೂರು: ಮಂತ್ರಿಗಳು ವರ್ಗಾವಣೆಯ ಕಮಿಷನ್ ಏಜೆಂಟ್​ಗಳಾಗಿದ್ದಾರೆ. ರಾಜ್ಯ ಇತಿಹಾಸದಲ್ಲೇ ಇಷ್ಟೊಂದು ವರ್ಗಾವಣೆ ಭ್ರಷ್ಟಾಚಾರ ಆಗಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಚಾಮುಂಡಿ ಸನ್ನಿಧಾನದಲ್ಲಿ ನಿಂತು ನಾನು ಈ ಮಾತನ್ನು ಜವಾಬ್ದಾರಿಯುತವಾಗಿ ಹೇಳುತ್ತಿದ್ದೇನೆ. ಸಿಎಂ ಕಣ್ಮುಂಚಿ ಕುಳಿತು ಕೊಂಡಿರುವುದು ಒಳ್ಳೆಯದಲ್ಲ. ಎಲ್ಲ ಹಂತದ ಅಧಿಕಾರಿಗಳ ವರ್ಗಾವಣೆಗೆ ಹಣ ಪಡೆಯಲಾಗುತ್ತಿದೆ. ಅಧಿಕಾರಿಗಳಿಗೆ ಯಾವ ಕ್ಷಣದಲ್ಲಿ ಈ ಸರ್ಕಾರ ಬೀಳುತ್ತೋ, ಯಾವ ಕ್ಷಣದಲ್ಲಿ ನಮ್ಮ ವರ್ಗಾವಣೆ ಆಗುತ್ತೋ ಎಂಬ ಆತಂಕವಿದೆ ಎಂದರು.

ಕೈ ಶಾಸಕರನ್ನು ಸರ್ಕಾರ ಬೀಳಿಸೋಣಾ ಬನ್ನಿ ಎಂದು ನಾವು ಕರೆಯಲ್ಲ. ಬಿಜೆಪಿ ಕರೆದ ಕೂಡಲೇ ಬರುವಷ್ಟು ಕಾಂಗ್ರೆಸ್ ಶಾಸಕರು ದುರ್ಬಲರಾ? ಅವರ ಶಾಸಕರ ಬಗ್ಗೆ ಅವರ ಅಧ್ಯಕ್ಷರಿಗೆ ನಂಬಿಕೆ ಇಲ್ಲ. ರಾಜ್ಯದ ಜೆಡಿಎಸ್-ಕಾಂಗ್ರೆಸ್ ಶಾಸಕರು ದುರ್ಬಲರು. ಇಂಥ ಸರ್ಕಾರ ಉಳಿಯುತ್ತಾ? ನಮ್ಮ ಒಬ್ಬ ಶಾಸಕರನ್ನು ಮುಟ್ಟಿ ನೋಡೋಣಾ? ಬಿಜೆಪಿಯ ಶಾಸಕರು ಸಿಂಹ ರೂಪದ ಶಾಸಕರು ಎಂದು ಕಿಡಿಕಾರಿದರು..ಕಾಂಗ್ರೆಸ್ ಶಾಸಕರು ಮಾರಾಟದ ವಸ್ತುಗಳಾಗಿದ್ದಾರೆ ಅಂತ ನಾವು ಹೇಳ್ತಿಲ್ಲ. ಕಾಂಗ್ರೆಸ್ ಶಾಸಕರು ಅಷ್ಟು ದುರ್ಬಲಾಗಿದ್ದಾರೆಂದು ಅವರೇ ಹೇಳುತ್ತಿದ್ದಾರೆ. ಹಾಗಾಗಿ ಈ ಸರ್ಕಾರ ಬಿದ್ದೋಗುತ್ತೆ ನಾವು ಮತ್ತೆ ಸರ್ಕಾರ ರಚನೆ‌ ಮಾಡ್ತೀವಿ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ವರ್ಗಗಳಿಗೆ ಕೊಟ್ಟಿರುವ ಕೊಡುಗೆ ಜನರಿಗೆ ತಿಳಿಸಲಿದ್ದೇವೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ್ರೂ ಈ ದೇಶಕ್ಕೆ ಸಂವಿಧಾನ ಕೊಟ್ಟ ಅಂಬೇಡ್ಕರ್ ಅವರ ಉದ್ದೇಶ ಯಾರೂ ಕೂಡ ಈಡೇರಿಸಿರಲಿಲ್ಲ. ಆದ್ರೆ ಪ್ರಧಾನಿ ಮೋದಿ ಆ ಕೆಲಸವನ್ನ ಮಾಡಿದ್ದಾರೆ. ಆ ಬಗ್ಗೆ ಜನರಿಗೆ ಅರಿವು ಮೂಡಲಿಸಲಿದ್ದೇವಿ ಎಂದು ಈಶ್ವರಪ್ಪ ಹೇಳಿದರು.

ರಾಜ್ಯ ಸರ್ಕಾರದ ಬಗ್ಗೆ ಮಾತನಾಡುವ ಪ್ರಶ್ನೆ ಉದ್ಭವವೇ ಆಗೋಲ್ಲ. ಯಾಕೆಂದ್ರೆ ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಅನ್ನೋ ಪ್ರಶ್ನೆ ಬಂದಿದೆ. ಕಾರಣ ರಾಜ್ಯ ಸರ್ಕಾರದ ಅಧಿಕಾರಿಗಳೇ, ಈ ಸರ್ಕಾರ ಇರುತ್ತೋ‌ ಇಲ್ಲವೋ ಅಂತಿದ್ದಾರೆ. ಸರ್ಕಾರಿ ಅಧಿಕಾರಿಗಳ ವರ್ಗಾವಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ. ನಾನು ಚಾಮುಂಡೇಶ್ವರಿ ದೇವಿ ಮುಂದೆ ಕುಳಿತು ಹೇಳ್ತಿದ್ದೀನಿ. ಮಂತ್ರಿಗಳು ವರ್ಗಾವಣೆಯ ಏಜೆಂಟ್​ಗಳಾಗಿದ್ದಾರೆ. ಕಾಂಗ್ರೆಸ್​ ವರ್ಗಾವಣೆಯಲ್ಲಿ ಭ್ರಷ್ಟಾಚಾರ ಮಾಡ್ತಿದೆ. ಹಾಗಾಗಿ ಈ ದೇಶದಲ್ಲಿ , ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ನಾವು ಮುಂದಾಗಿದ್ದೇವೆ ಎಂದು ಈಶ್ವರಪ್ಪ ಹೇಳಿದರು..

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

10 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

11 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

11 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

11 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

11 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

12 hours ago