ಮೈಸೂರು: ಮಂತ್ರಿಗಳು ವರ್ಗಾವಣೆಯ ಕಮಿಷನ್ ಏಜೆಂಟ್ಗಳಾಗಿದ್ದಾರೆ. ರಾಜ್ಯ ಇತಿಹಾಸದಲ್ಲೇ ಇಷ್ಟೊಂದು ವರ್ಗಾವಣೆ ಭ್ರಷ್ಟಾಚಾರ ಆಗಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಚಾಮುಂಡಿ ಸನ್ನಿಧಾನದಲ್ಲಿ ನಿಂತು ನಾನು ಈ ಮಾತನ್ನು ಜವಾಬ್ದಾರಿಯುತವಾಗಿ ಹೇಳುತ್ತಿದ್ದೇನೆ. ಸಿಎಂ ಕಣ್ಮುಂಚಿ ಕುಳಿತು ಕೊಂಡಿರುವುದು ಒಳ್ಳೆಯದಲ್ಲ. ಎಲ್ಲ ಹಂತದ ಅಧಿಕಾರಿಗಳ ವರ್ಗಾವಣೆಗೆ ಹಣ ಪಡೆಯಲಾಗುತ್ತಿದೆ. ಅಧಿಕಾರಿಗಳಿಗೆ ಯಾವ ಕ್ಷಣದಲ್ಲಿ ಈ ಸರ್ಕಾರ ಬೀಳುತ್ತೋ, ಯಾವ ಕ್ಷಣದಲ್ಲಿ ನಮ್ಮ ವರ್ಗಾವಣೆ ಆಗುತ್ತೋ ಎಂಬ ಆತಂಕವಿದೆ ಎಂದರು.
ಕೈ ಶಾಸಕರನ್ನು ಸರ್ಕಾರ ಬೀಳಿಸೋಣಾ ಬನ್ನಿ ಎಂದು ನಾವು ಕರೆಯಲ್ಲ. ಬಿಜೆಪಿ ಕರೆದ ಕೂಡಲೇ ಬರುವಷ್ಟು ಕಾಂಗ್ರೆಸ್ ಶಾಸಕರು ದುರ್ಬಲರಾ? ಅವರ ಶಾಸಕರ ಬಗ್ಗೆ ಅವರ ಅಧ್ಯಕ್ಷರಿಗೆ ನಂಬಿಕೆ ಇಲ್ಲ. ರಾಜ್ಯದ ಜೆಡಿಎಸ್-ಕಾಂಗ್ರೆಸ್ ಶಾಸಕರು ದುರ್ಬಲರು. ಇಂಥ ಸರ್ಕಾರ ಉಳಿಯುತ್ತಾ? ನಮ್ಮ ಒಬ್ಬ ಶಾಸಕರನ್ನು ಮುಟ್ಟಿ ನೋಡೋಣಾ? ಬಿಜೆಪಿಯ ಶಾಸಕರು ಸಿಂಹ ರೂಪದ ಶಾಸಕರು ಎಂದು ಕಿಡಿಕಾರಿದರು..ಕಾಂಗ್ರೆಸ್ ಶಾಸಕರು ಮಾರಾಟದ ವಸ್ತುಗಳಾಗಿದ್ದಾರೆ ಅಂತ ನಾವು ಹೇಳ್ತಿಲ್ಲ. ಕಾಂಗ್ರೆಸ್ ಶಾಸಕರು ಅಷ್ಟು ದುರ್ಬಲಾಗಿದ್ದಾರೆಂದು ಅವರೇ ಹೇಳುತ್ತಿದ್ದಾರೆ. ಹಾಗಾಗಿ ಈ ಸರ್ಕಾರ ಬಿದ್ದೋಗುತ್ತೆ ನಾವು ಮತ್ತೆ ಸರ್ಕಾರ ರಚನೆ ಮಾಡ್ತೀವಿ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ವರ್ಗಗಳಿಗೆ ಕೊಟ್ಟಿರುವ ಕೊಡುಗೆ ಜನರಿಗೆ ತಿಳಿಸಲಿದ್ದೇವೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ್ರೂ ಈ ದೇಶಕ್ಕೆ ಸಂವಿಧಾನ ಕೊಟ್ಟ ಅಂಬೇಡ್ಕರ್ ಅವರ ಉದ್ದೇಶ ಯಾರೂ ಕೂಡ ಈಡೇರಿಸಿರಲಿಲ್ಲ. ಆದ್ರೆ ಪ್ರಧಾನಿ ಮೋದಿ ಆ ಕೆಲಸವನ್ನ ಮಾಡಿದ್ದಾರೆ. ಆ ಬಗ್ಗೆ ಜನರಿಗೆ ಅರಿವು ಮೂಡಲಿಸಲಿದ್ದೇವಿ ಎಂದು ಈಶ್ವರಪ್ಪ ಹೇಳಿದರು.
ರಾಜ್ಯ ಸರ್ಕಾರದ ಬಗ್ಗೆ ಮಾತನಾಡುವ ಪ್ರಶ್ನೆ ಉದ್ಭವವೇ ಆಗೋಲ್ಲ. ಯಾಕೆಂದ್ರೆ ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಅನ್ನೋ ಪ್ರಶ್ನೆ ಬಂದಿದೆ. ಕಾರಣ ರಾಜ್ಯ ಸರ್ಕಾರದ ಅಧಿಕಾರಿಗಳೇ, ಈ ಸರ್ಕಾರ ಇರುತ್ತೋ ಇಲ್ಲವೋ ಅಂತಿದ್ದಾರೆ. ಸರ್ಕಾರಿ ಅಧಿಕಾರಿಗಳ ವರ್ಗಾವಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ. ನಾನು ಚಾಮುಂಡೇಶ್ವರಿ ದೇವಿ ಮುಂದೆ ಕುಳಿತು ಹೇಳ್ತಿದ್ದೀನಿ. ಮಂತ್ರಿಗಳು ವರ್ಗಾವಣೆಯ ಏಜೆಂಟ್ಗಳಾಗಿದ್ದಾರೆ. ಕಾಂಗ್ರೆಸ್ ವರ್ಗಾವಣೆಯಲ್ಲಿ ಭ್ರಷ್ಟಾಚಾರ ಮಾಡ್ತಿದೆ. ಹಾಗಾಗಿ ಈ ದೇಶದಲ್ಲಿ , ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ನಾವು ಮುಂದಾಗಿದ್ದೇವೆ ಎಂದು ಈಶ್ವರಪ್ಪ ಹೇಳಿದರು..
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…