ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ -Vishwanews24
ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ
ಬನವಾಸಿಯ ಟಿ.ಎಂ.ಎಸ್. ಎದುರು ಕೆಪಿಸಿಸಿ ಬನವಾಸಿ ಬ್ಲಾಕ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ವಿವೇಕ ಹೆಬ್ಬಾರ್ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾದರು. ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಹಾಗೂ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿನಾಥ ಗಾಂವ್ಕರ್ ಅವರು ವಿವೇಕ್ ಹೆಬ್ಬಾರ್ ಅವರಿಗೆ ಪಕ್ಷದ ಶಾಲು ಹಾಕಿ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು.
ಉದ್ಯಾವರ : ಬಿಜೆಪಿ ಬೆಂಬಲಿತ ಗ್ರಾ. ಪಂ. ಸದಸ್ಯೆ ಸಹಿತ ಹಲವರು ಕಾಂಗ್ರೆಸ್ ಸೇರ್ಪಡೆ – Vishwanews24
ಈ ವೇಳೆ ಬನವಾಸಿ ಭಾಗದ ಮುಖಂಡರಾದ ದ್ಯಾಮಣ್ಣ ದೊಡ್ಮನಿ, ಮಂಗಳಾ ನಾಯ್ಕ, ಸಿದ್ದು ನರೇಗಲ್, ರಘು ನಾಯ್ಕ, ಪ್ರಕಾಶ್ ಹೆಗಡೆ, ಗಣಪತಿ ನಾಯ್ಕ ಬಾಶಿ, ಪ್ರಶಾಂತ್ ಗೌಡರ್, ಜಿ.ವಿ ಹೆಗಡೆ, ಸುಭಾಷ್ ಮಡಿವಾಳ, ನಾಗೇಂದ್ರ ಮಡಿವಾಳ, ಸತೀಶ್ ನಾಯ್ಕ, ಸುರೇಶ್ ಗಡಿಗೇರಿ, ಸೇರಿದಂತೆ ಬನವಾಸಿ ಭಾಗದ ಹತ್ತು ಪಂಚಾಯತ್ ಗಳಲ್ಲಿ ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ನೂರಾರು ಮಂದಿಗೆ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಸಿ.ಎಫ್ ನಾಯ್ಕ, ವೆಂಕಟೇಶ್ ಹೆಗಡೆ ಹೊಸಬಾಳೆ, ಆರ್.ಎಚ್. ನಾಯ್ಕ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವರು ಉಪಸ್ಥಿತರಿದ್ದರು.
ಉಡುಪಿ: ಬಸ್ ಟೈಮಿಂಗ್ ವಿಚಾರ – ಎರಡು ಖಾಸಗಿ ಬಸ್ ನಿರ್ವಾಹಕರ ನಡುವೆ ಹೊಡೆದಾಟ – Vishwanews24
