ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಕಾರಿಗೆ ವಿಚಾರದಲ್ಲಿ ಬಿಜೆಪಿ ಮುಖಂಡನನ್ನು ಅರೆಸ್ಟ್ ಮಾಡಿರುವ ವಿಚಾರಕ್ಕೆ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿರುದ್ದ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಇದೀಗ ಎರಡು ಎಫ್ಐಆರ್ ದಾಖಲಾಗಿದ್ದು, ಈ ಹಿನ್ನಲೆ ಪೊಲೀಸರು ಪೂಂಜಾ ಅರೆಸ್ಟ್ ಗೆ ಮನೆಗೆ ಆಗಮಿಸಿದ್ದಾರೆ.
ಮೇ 18 ರಂದು ಅಕ್ರಮ ಕಲ್ಲು ಕೋರೆ ಗಣಿಗಾರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನನ್ನು ವಿನಾಕಾರಣ ಬಂಧಿಸಲಾಗಿರುವುದನ್ನು ಖಂಡಿಸಿ ಶಾಸಕ ಹರೀಶ್ ಪೂಂಜ ಕಾರ್ಯಕರ್ತರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿ ಪ್ರತಿಭಟಿಸಿ ಪೊಲೀಸರಿಗೆ ನಿಂಧಿಸಿದ್ದರು. ಬಳಿಕ ನಡೆದ ಮೇ.20 ರಂದು ತಾಲೂಕು ಆಡಳಿತದ ಮುಂದೆ ಪ್ರತಿಭಟನೆ ನಡೆಸಿ ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಎರಡನೇ ಪ್ರಕರಣ ದಾಖಲಿಸಲಾಗಿತ್ತು.
ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬಂಧನಕ್ಕೆ ಮುಂದಾಗಿದ್ದು, ಅವರ ಗರ್ಡಾಡಿ ನಿವಾಸದ ಮುಂದೆ ಪೊಲೀಸ್ ತಂಡ ಸಜ್ಜಾಗಿದೆ. ಯಾವುದೇ ಸಮಯದಲ್ಲೂ ಹರೀಶ್ ಪೂಂಜ ಬಂಧನದ ಸಾಧ್ಯತೆ ಎದುರಾಗಿದೆ. ಈ ಹಿನ್ನೆಲೆ ಅವರ ಮನೆಗೆ ಸಾರ್ವಜನಿಕ ಭೇಟಿಗೆ ಪೊಲೀಸರು ನಿರಾಕರಿಸಿದ್ದು, ಮನೆಗೆ ಹೋಗುವ ರಸ್ತೆಗೆ ಪೊಲೀಸ್ ಸರ್ಪಗಾವಲು ಇರಿಸಲಾಗಿದೆ. ವಿಚಾರ ತಿಳಿದು ಅವರ ಮನೆ ಮುಂದೆ ಕಾರ್ಯಕರ್ತರು ಜಮಾಯಿಸಲಾರಂಬಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…