ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಕಾರಿಗೆ ವಿಚಾರದಲ್ಲಿ ಬಿಜೆಪಿ ಮುಖಂಡನನ್ನು ಅರೆಸ್ಟ್ ಮಾಡಿರುವ ವಿಚಾರಕ್ಕೆ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿರುದ್ದ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಇದೀಗ ಎರಡು ಎಫ್ಐಆರ್ ದಾಖಲಾಗಿದ್ದು, ಈ ಹಿನ್ನಲೆ ಪೊಲೀಸರು ಪೂಂಜಾ ಅರೆಸ್ಟ್ ಗೆ ಮನೆಗೆ ಆಗಮಿಸಿದ್ದಾರೆ.
ಮೇ 18 ರಂದು ಅಕ್ರಮ ಕಲ್ಲು ಕೋರೆ ಗಣಿಗಾರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನನ್ನು ವಿನಾಕಾರಣ ಬಂಧಿಸಲಾಗಿರುವುದನ್ನು ಖಂಡಿಸಿ ಶಾಸಕ ಹರೀಶ್ ಪೂಂಜ ಕಾರ್ಯಕರ್ತರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿ ಪ್ರತಿಭಟಿಸಿ ಪೊಲೀಸರಿಗೆ ನಿಂಧಿಸಿದ್ದರು. ಬಳಿಕ ನಡೆದ ಮೇ.20 ರಂದು ತಾಲೂಕು ಆಡಳಿತದ ಮುಂದೆ ಪ್ರತಿಭಟನೆ ನಡೆಸಿ ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಎರಡನೇ ಪ್ರಕರಣ ದಾಖಲಿಸಲಾಗಿತ್ತು.
ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬಂಧನಕ್ಕೆ ಮುಂದಾಗಿದ್ದು, ಅವರ ಗರ್ಡಾಡಿ ನಿವಾಸದ ಮುಂದೆ ಪೊಲೀಸ್ ತಂಡ ಸಜ್ಜಾಗಿದೆ. ಯಾವುದೇ ಸಮಯದಲ್ಲೂ ಹರೀಶ್ ಪೂಂಜ ಬಂಧನದ ಸಾಧ್ಯತೆ ಎದುರಾಗಿದೆ. ಈ ಹಿನ್ನೆಲೆ ಅವರ ಮನೆಗೆ ಸಾರ್ವಜನಿಕ ಭೇಟಿಗೆ ಪೊಲೀಸರು ನಿರಾಕರಿಸಿದ್ದು, ಮನೆಗೆ ಹೋಗುವ ರಸ್ತೆಗೆ ಪೊಲೀಸ್ ಸರ್ಪಗಾವಲು ಇರಿಸಲಾಗಿದೆ. ವಿಚಾರ ತಿಳಿದು ಅವರ ಮನೆ ಮುಂದೆ ಕಾರ್ಯಕರ್ತರು ಜಮಾಯಿಸಲಾರಂಬಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…