ರಾಯಚೂರು: ಬಿಜೆಪಿ ಶಿಸ್ತಿನ ಪಕ್ಷ ಬಿ.ಎಸ್.ಯಡಿಯೂರಪ್ಪ ಶಿಸ್ತಿನ ನಾಯಕ. ಊಹಾಪೋಹಗಳಿಗೆ ಕಿವಿಗೊಡದೆ ಅವರ ಮಾತನ್ನು ನಂಬಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಲ್ಲಿ ಸಹಿ ಸಂಗ್ರಹ ಸಂಪ್ರದಾಯವೇ ಇಲ್ಲ. ಅದು ಬಿಜೆಪಿ ಪದ್ಧತಿ ಅಲ್ಲ. ಪರವಾಗಲಿ ವಿರೋಧವಾಗಲಿ ಸಹಿ ಸಂಗ್ರಹ ಮಾಡಕೂಡದು ಎಂದು ಪಕ್ಷದ ವರಿಷ್ಠರು ತಿಳಿಸಿದ್ದಾರೆ. ಅವರು ಮಾಡಿದ್ದಾರಂತೆ, 60 ಜನ ಸಹಿ ಹಾಕಿದ್ದಾರಂತೆ ಎಂಬ ಅಂತೆ ಕಂತೆ ಬಿಡಿ. ಸಹಿ ಮಾಡಿದ್ದು ಯಾರಾದರೂ ನೋಡಿದ್ದಾರಾ? ಎಂದು ಪ್ರಶ್ನಿಸಿದರು
ಈ ವಿಚಾರದಲ್ಲಿ ಬಿಎಸ್ ವೈ, ನಳೀನ್ ಕುಮಾರ್ ಕಟೀಲ್, ಪ್ರಹ್ಲಾದ ಜೋಶಿ ಸ್ಪಷ್ಟ ಹೇಳಿಕೆ ನೀಡಿದ್ದಾರೆ. ಇನ್ನಾದರೂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕುತಂತ್ರ ರಾಜಕಾರಣ ಮಾಡುವುದನ್ನು ಬಿಡಲಿ ಎಂದರು.
ಬಿಎಸ್ ವೈ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡುತ್ತಿದ್ದಂತೆ ಸಿದ್ದರಾಮಯ್ಯ , ಡಿ.ಕೆ.ಶಿವಕುಮಾರ್ ಹೇಳಿಕೆಯೇ ಬದಲಾಗಿದೆ. ಆದರೆ, ಆಟ ಬಿಜೆಪಿ ಮುಂದೆ ನಡೆಯಲ್ಲ. ಮುಂದೆ ಅವರೇ ಅಧಿಕಾರಕ್ಕಾಗಿ ಕಚ್ಚಾಡ್ತಾರೆ ನೋಡುತ್ತಿರಿ. ಅವರಿಗೆ ಯಡಿಯೂರಪ್ಪನವರು ಯಾವ ಉತ್ತರ ನೀಡಬೇಕಿತ್ತೋ ಅದು ನೀಡಿಯಾಗಿದೆ ಎಂದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…