ರಾಯಚೂರು: ಬಿಜೆಪಿ ಶಿಸ್ತಿನ ಪಕ್ಷ ಬಿ.ಎಸ್.ಯಡಿಯೂರಪ್ಪ ಶಿಸ್ತಿನ ನಾಯಕ. ಊಹಾಪೋಹಗಳಿಗೆ ಕಿವಿಗೊಡದೆ ಅವರ ಮಾತನ್ನು ನಂಬಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಲ್ಲಿ ಸಹಿ ಸಂಗ್ರಹ ಸಂಪ್ರದಾಯವೇ ಇಲ್ಲ. ಅದು ಬಿಜೆಪಿ ಪದ್ಧತಿ ಅಲ್ಲ. ಪರವಾಗಲಿ ವಿರೋಧವಾಗಲಿ ಸಹಿ ಸಂಗ್ರಹ ಮಾಡಕೂಡದು ಎಂದು ಪಕ್ಷದ ವರಿಷ್ಠರು ತಿಳಿಸಿದ್ದಾರೆ. ಅವರು ಮಾಡಿದ್ದಾರಂತೆ, 60 ಜನ ಸಹಿ ಹಾಕಿದ್ದಾರಂತೆ ಎಂಬ ಅಂತೆ ಕಂತೆ ಬಿಡಿ. ಸಹಿ ಮಾಡಿದ್ದು ಯಾರಾದರೂ ನೋಡಿದ್ದಾರಾ? ಎಂದು ಪ್ರಶ್ನಿಸಿದರು
ಈ ವಿಚಾರದಲ್ಲಿ ಬಿಎಸ್ ವೈ, ನಳೀನ್ ಕುಮಾರ್ ಕಟೀಲ್, ಪ್ರಹ್ಲಾದ ಜೋಶಿ ಸ್ಪಷ್ಟ ಹೇಳಿಕೆ ನೀಡಿದ್ದಾರೆ. ಇನ್ನಾದರೂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕುತಂತ್ರ ರಾಜಕಾರಣ ಮಾಡುವುದನ್ನು ಬಿಡಲಿ ಎಂದರು.
ಬಿಎಸ್ ವೈ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡುತ್ತಿದ್ದಂತೆ ಸಿದ್ದರಾಮಯ್ಯ , ಡಿ.ಕೆ.ಶಿವಕುಮಾರ್ ಹೇಳಿಕೆಯೇ ಬದಲಾಗಿದೆ. ಆದರೆ, ಆಟ ಬಿಜೆಪಿ ಮುಂದೆ ನಡೆಯಲ್ಲ. ಮುಂದೆ ಅವರೇ ಅಧಿಕಾರಕ್ಕಾಗಿ ಕಚ್ಚಾಡ್ತಾರೆ ನೋಡುತ್ತಿರಿ. ಅವರಿಗೆ ಯಡಿಯೂರಪ್ಪನವರು ಯಾವ ಉತ್ತರ ನೀಡಬೇಕಿತ್ತೋ ಅದು ನೀಡಿಯಾಗಿದೆ ಎಂದರು.
ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್ಬಿಐ ಗವರ್ನರ್ ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…
ಹಿಜಾಬ್ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎಚ್ಚರಿಕೆ…
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…