ಪುತ್ತೂರು: ಶಿಸ್ತಿಗೆ ಹೆಸರಾದ ಬಿಜೆಪಿ ಈ ಕಾರಣದಿಂದಾಗಿಯೇ ಬಲಿಷ್ಠವಾಗಿ ಬೆಳೆದು ನಿಂತಿದೆ. ಅದೇ ಶಿಸ್ತು ಉಳಿಸಿಕೊಂಡರೆ ಮಾತ್ರ ಪಕ್ಷ ಸದೃಢವಾಗಿ ಬೆಳೆಯಬಲ್ಲದು. ಇಲ್ಲವಾದರೆ ಕಾಂಗ್ರೆಸ್ ಸ್ಥಿತಿಯೇ ಬರಬಹುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಎಚ್ಚರಿಸಿದ್ದಾರೆ.
ಪುತ್ತೂರಿನಲ್ಲಿ ಮಂಗಳವಾರ ನಡೆದ ಜನಸೇವಕ ಸಮಾವೇಶ ಮತ್ತು ನೂತನ ಸಚಿವ ಅಂಗಾರರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಒಂದು ಕಾಲದಲ್ಲಿ ಕಾಂಗ್ರೆಸ್ನಲ್ಲೂ ಉತ್ತಮ ನಾಯಕರಿದ್ದರು. ಇವತ್ತು ಆ ಪಕ್ಷ ಹೀನಾಯ ಸ್ಥಿತಿಗೆ ತಲುಪಲು ಅಶಿಸ್ತೇ ಕಾರಣ. ಬಿಜೆಪಿಯನ್ನು ಪಾರ್ಟಿ ವಿದ್ ಡಿಫರೆನ್ಸ್ ಎನ್ನಲಾಗುತ್ತಿದೆ. ಈ ಶಿಸ್ತನ್ನು ನಾವೆಲ್ಲ ಉಳಿಸಿಕೊಳ್ಳಬೇಕು. ಪಕ್ಷದ ಬಗ್ಗೆ ಎಲ್ಲಿ ಮಾತನಾಡಬೇಕೋ ಅಲ್ಲೇ ಮಾತನಾಡಬೇಕು. ಎಲ್ಲೋ ಹೊಟೇಲ್ನಲ್ಲಿ ಕುಳಿತು ಮಾತನಾಡುವುದಲ್ಲ. ಇಲ್ಲದಿದ್ದರೆ ಕಾಂಗ್ರೆಸ್ ಸ್ಥಿತಿ ನಮಗೂ ಬರಬಹುದು ಎಂದರು.
ನಾವು ಮಾತ್ರ ನಿರಂತರ ದೇಶ ಆಳುತ್ತೇವೆ ಎಂಬ ಭ್ರಮೆ ಮತ್ತು ಅಹಂಕಾರದಲ್ಲಿದ್ದ ಕಾಂಗ್ರೆಸ್ನ ಅಡ್ರೆಸ್ ಹುಡುಕುವ ಸ್ಥಿತಿ ಬಂದಿದೆ. ಪ್ರತಿಪಕ್ಷವೇ ಇಲ್ಲದೆ ಕೇವಲ ಬಿಜೆಪಿಯೊಂದೇ ಆವರಿಸುವ ದಿನ ಬರಬೇಕು. ಈ ಬಾರಿ ಗ್ರಾಪಂ ಚುನಾವಣೆಯಲ್ಲಿ ರಾಜ್ಯದ ಶೇ. 63 ಸ್ಥಾನಗಳು ಬಿಜೆಪಿ ಬೆಂಬಲಿತರ ಪಾಲಾಗಿದೆ. ಅಧಿಕಾರದ ಅಮಲಿನಲ್ಲಿ ಮೆರೆಯುತ್ತಿದ್ದವರ ಅಂತಿಮ ದಿನಗಳು ಬಂದಿವೆ. ಕಾಂಗ್ರೆಸ್ ಹೋಳಾದ ಪಕ್ಷವಾಗಿದ್ದು, ಡಿಕೆಶಿ ಬಣ, ಸಿದ್ದು ಬಣ ಎಂದು ಇಬ್ಭಾಗವಾಗಿದೆ. ವಿರೋಧಿಗಳಿಗೆ ನಾವು ಆಹಾರವಾಗಬಾರದು. ನಮ್ಮ ಮಾತು, ಕೆಲಸಗಳಿಂದ ಇತರರಿಗೆ ಮಾದರಿಯಾಗಬೇಕು ಎಂದು ಸಚಿವ ಡಿವಿಎಸ್ ತಿಳಿಸಿದರು.
ಇನ್ನೆರಡು ದಿನಗಳಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ -Vishwanews24
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…