Featured

ಬಿಜೆಪಿ ಶಿಸ್ತು ಉಳಿಸಿಕೊಂಡರೆ ಮಾತ್ರ ಪಕ್ಷ ಸದೃಢವಾಗಿ ಬೆಳೆಯಬಲ್ಲದು, ಇಲ್ಲವಾದರೆ ಕಾಂಗ್ರೆಸ್ ಸ್ಥಿತಿಯೇ ಬರಬಹುದು : ಡಿ.ವಿ. ಸದಾನಂದ ಗೌಡ -Vishwanews24

ಬಿಜೆಪಿ ಶಿಸ್ತು ಉಳಿಸಿಕೊಂಡರೆ ಮಾತ್ರ ಪಕ್ಷ ಸದೃಢವಾಗಿ ಬೆಳೆಯಬಲ್ಲದು, ಇಲ್ಲವಾದರೆ ಕಾಂಗ್ರೆಸ್ ಸ್ಥಿತಿಯೇ ಬರಬಹುದು : ಡಿ.ವಿ. ಸದಾನಂದ ಗೌಡ -Vishwanews24

ನಮ್ಮ ಮಾತು, ಕೆಲಸಗಳಿಂದ ಇತರರಿಗೆ ಮಾದರಿಯಾಗಬೇಕು..

ಪುತ್ತೂರು: ಶಿಸ್ತಿಗೆ ಹೆಸರಾದ ಬಿಜೆಪಿ ಈ ಕಾರಣದಿಂದಾಗಿಯೇ ಬಲಿಷ್ಠವಾಗಿ ಬೆಳೆದು ನಿಂತಿದೆ. ಅದೇ ಶಿಸ್ತು ಉಳಿಸಿಕೊಂಡರೆ ಮಾತ್ರ ಪಕ್ಷ ಸದೃಢವಾಗಿ ಬೆಳೆಯಬಲ್ಲದು. ಇಲ್ಲವಾದರೆ ಕಾಂಗ್ರೆಸ್ ಸ್ಥಿತಿಯೇ ಬರಬಹುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಎಚ್ಚರಿಸಿದ್ದಾರೆ.

ಪುತ್ತೂರಿನಲ್ಲಿ ಮಂಗಳವಾರ ನಡೆದ ಜನಸೇವಕ ಸಮಾವೇಶ ಮತ್ತು ನೂತನ ಸಚಿವ ಅಂಗಾರರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಒಂದು ಕಾಲದಲ್ಲಿ ಕಾಂಗ್ರೆಸ್‌ನಲ್ಲೂ ಉತ್ತಮ ನಾಯಕರಿದ್ದರು. ಇವತ್ತು ಆ ಪಕ್ಷ ಹೀನಾಯ ಸ್ಥಿತಿಗೆ ತಲುಪಲು ಅಶಿಸ್ತೇ ಕಾರಣ. ಬಿಜೆಪಿಯನ್ನು ಪಾರ್ಟಿ ವಿದ್ ಡಿಫರೆನ್ಸ್ ಎನ್ನಲಾಗುತ್ತಿದೆ. ಈ ಶಿಸ್ತನ್ನು ನಾವೆಲ್ಲ ಉಳಿಸಿಕೊಳ್ಳಬೇಕು. ಪಕ್ಷದ ಬಗ್ಗೆ ಎಲ್ಲಿ ಮಾತನಾಡಬೇಕೋ ಅಲ್ಲೇ ಮಾತನಾಡಬೇಕು. ಎಲ್ಲೋ ಹೊಟೇಲ್‌ನಲ್ಲಿ ಕುಳಿತು ಮಾತನಾಡುವುದಲ್ಲ. ಇಲ್ಲದಿದ್ದರೆ ಕಾಂಗ್ರೆಸ್ ಸ್ಥಿತಿ ನಮಗೂ ಬರಬಹುದು ಎಂದರು.

ನಾವು ಮಾತ್ರ ನಿರಂತರ ದೇಶ ಆಳುತ್ತೇವೆ ಎಂಬ ಭ್ರಮೆ ಮತ್ತು ಅಹಂಕಾರದಲ್ಲಿದ್ದ ಕಾಂಗ್ರೆಸ್‌ನ ಅಡ್ರೆಸ್ ಹುಡುಕುವ ಸ್ಥಿತಿ ಬಂದಿದೆ. ಪ್ರತಿಪಕ್ಷವೇ ಇಲ್ಲದೆ ಕೇವಲ ಬಿಜೆಪಿಯೊಂದೇ ಆವರಿಸುವ ದಿನ ಬರಬೇಕು. ಈ ಬಾರಿ ಗ್ರಾಪಂ ಚುನಾವಣೆಯಲ್ಲಿ ರಾಜ್ಯದ ಶೇ. 63 ಸ್ಥಾನಗಳು ಬಿಜೆಪಿ ಬೆಂಬಲಿತರ ಪಾಲಾಗಿದೆ. ಅಧಿಕಾರದ ಅಮಲಿನಲ್ಲಿ ಮೆರೆಯುತ್ತಿದ್ದವರ ಅಂತಿಮ ದಿನಗಳು ಬಂದಿವೆ. ಕಾಂಗ್ರೆಸ್ ಹೋಳಾದ ಪಕ್ಷವಾಗಿದ್ದು, ಡಿಕೆಶಿ ಬಣ, ಸಿದ್ದು ಬಣ ಎಂದು ಇಬ್ಭಾಗವಾಗಿದೆ. ವಿರೋಧಿಗಳಿಗೆ ನಾವು ಆಹಾರವಾಗಬಾರದು. ನಮ್ಮ ಮಾತು, ಕೆಲಸಗಳಿಂದ ಇತರರಿಗೆ ಮಾದರಿಯಾಗಬೇಕು ಎಂದು ಸಚಿವ ಡಿವಿಎಸ್ ತಿಳಿಸಿದರು.

ಇನ್ನೆರಡು ದಿನಗಳಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ -Vishwanews24

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

7 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago