ಹೈದರಾಬಾದ್ : ಮಹಾತ್ಮ ಗಾಂಧಿ ಕೋರಿಕೆ ಮೇರೆಗೆ ಸಾರ್ವಕರ್ ಅವರು ಬಿಡುಗಡೆಗಾಗಿ ಕ್ಷಮಾಪಣೆ ನೀಡುವಂತೆ ಬ್ರಿಟಿಷರಿಗೆ ಪತ್ರ ಬರೆದಿದ್ದರು ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ, ಬಿಜೆಪಿ ಶೀಘ್ರದಲ್ಲಿಯೇ ವಿನಾಯಕ್ ದಾಮೋದರ್ ಸಾರ್ವಕರ್ ಅವರನ್ನು ರಾಷ್ಟ್ರಪಿತ ಎಂದು ಘೋಷಿಸಲಿದೆ ಎಂದು ಆರೋಪಿಸಿರುವುದಾಗಿ ವರದಿ ತಿಳಿಸಿದೆ.
ಎಎನ್ ಐ ಜೊತೆ ಮಾತನಾಡಿರುವ ಒವೈಸಿ, ಭಾರತೀಯ ಜನತಾ ಪಕ್ಷ ತಿರುಚಿದ ಇತಿಹಾಸವನ್ನು ಪ್ರಸ್ತುತಪಡಿಸುತ್ತಿದೆ. ಒಂದು ವೇಳೆ ಇದು ಮುಂದುವರಿದರೆ, ಅವರು ಮಹಾತ್ಮ ಗಾಂಧಿ ಹೆಸರನ್ನು ಕಿತ್ತೆಸೆದು ಸಾವರ್ಕರ್ ಅವರನ್ನು ರಾಷ್ಟ್ರಪಿತ ಎಂದು ಘೋಷಿಸುತ್ತಾರೆ. ಮಹಾತ್ಮ ಗಾಂಧಿ ಹತ್ಯೆಯಲ್ಲಿ ಆರೋಪಿ ಎನ್ನಲಾಗಿದ್ದ ಸಾವರ್ಕರ್ ಅವರನ್ನು ಜಸ್ಟೀಸ್ ಜೀವನ್ ಲಾಲ್ ಕಪೂರ್ ಸಮಿತಿ ತನಿಖೆಗೊಳಪಡಿಸಿತ್ತು ಎಂದು ಒವೈಸಿ ದೂರಿದ್ದಾರೆ.
ಮಹಾತ್ಮ ಗಾಂಧಿ ಅವರ ಕೋರಿಕೆ ಮೇರೆಗೆ ಸಾವರ್ಕರ್ ಅವರು ಕ್ಷಮಾಪಣೆ ನೀಡುವಂತೆ ಬ್ರಿಟಿಷರಿಗೆ ಪತ್ರ ಬರೆದಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…