ರಾಷ್ಟ್ರ ನ್ಯೂಸ್

ಬಿಜೆಪಿ ಸಂಸದನ ಪಾದಪೂಜೆ ಮಾಡಿ ಅದೇ ಗಲೀಜು ನೀರು ಕುಡಿದ ಕಾರ್ಯಕರ್ತ, ಸಾರ್ವಜನಿಕರ ಆಕ್ರೋಶ

ರಾಂಚಿ: ಕಾರ್ಯಕರ್ತರೊಬ್ಬರ ಬಿಜೆಪಿ ಸಂಸದರೊಬ್ಬರ ಪಾದ ಪೂಜೆ ಮಾಡಿ, ಕೊನೆಗೆ ಅದೇ ಗಲೀಜು ನೀರು ಕುಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಜಾರ್ಖಂಡ್ ರಾಜ್ಯದ ಗೊಡ್ಡಾ ಲೋಕಸಭಾ ಕ್ಷೇತ್ರದ ಸಂಸದ ನಿಶಿಕಾಂತ್ ದುಬೆ ಪಾದಪೂಜೆ ಮಾಡಿಸಿಕೊಂಡ ಸಂಸದರು. ಸಾರ್ವಜನಿಕ ಸಮಾರಂಭದಲ್ಲಿ ಪಾದ ಪೂಜೆ ಮಾಡಿಸಿಕೊಂಡು ಟ್ವಿಟ್ಟರ್ ಮತ್ತು ಫೇಸ್‍ಬುಕ್ ನಲ್ಲಿ ಸಂತಸವನ್ನು ಹಂಚಿಕೊಂಡಿದ್ದಾರೆ.

ಗುಡ್ಡಾ ಜಿಲ್ಲೆಯ ಕಲಾಲಿ ಗ್ರಾಮದ ಸೇತುವೆಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸಂಸದ ನಿಶಿಕಾಂತ್ ದುಬೆ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ಈ ವೇಳೆ ಸಮಾರಂಭದಲ್ಲಿ ಮಾತನಾಡುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವ, ಸಂಸದರು ಸೇತುವೆ ಶಿಲಾನ್ಯಾಸ ನೆರವೇರಿಸಿದ್ದಾರೆ. ಈ ಸೇತುವೆ ನಿರ್ಮಾಣದಿಂದ ನಮಗೆ ಅನುಕೂಲವಾಗಿದೆ. ಹಾಗಾಗಿ ನನಗೆ ಇಂದು ಸಂಸದರ ಪಾದಪೂಜೆ ಮಾಡಬೇಕು ಅಂತಾ ಅನಿಸುತ್ತಿದೆ ಅಂತಾ ಹೇಳಿದರು.

ತಮ್ಮ ಭಾಷಣ ಮುಗಿಸಿದ ಕಾರ್ಯಕರ್ತ ತಾವು ಹೇಳಿದಂತೆ ತುಂಬಿದ ಸಮಾರಂಭದಲ್ಲಿಯೇ ಸಂಸದ ಪಾದ ಪೂಜೆಗೆ ಮುಂದಾದರು. ಆದ್ರೆ ಸಂಸದರು ಮಾತ್ರ ಪಾದ ಪೂಜೆಗೆ ಯಾವುದೇ ವಿರೋಧ ವ್ಯಕ್ತಪಡಿಸದೇ ಖುಷಿಯಾಗಿ ಕಾಲುಗಳನ್ನು ತೊಳೆಸಿಕೊಂಡಿದ್ದಾರೆ. ಕಾರ್ಯಕರ್ತ ಇಷ್ಟಕ್ಕೆ ಸುಮ್ಮನಾಗದ ಪಾದಪೂಜೆ ಮಾಡಿದ ನೀರನ್ನು ಅಮೃತ ಅಂತಾ ಸೇವನೆ ಮಾಡಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಸಂಸದರ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಕಾರ್ಯಕರ್ತ ಪಾದಪೂಜೆಗೆ ಮುಂದಾದ್ರೆ ಸಚಿವರು ತಡೆಯುವ ಪ್ರಯತ್ನ ಮಾಡಬಹುದಿತ್ತು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಜಾಹಿರಾತು: ಪಂಡೀತ್ ಸುದರ್ಶನ್ ಭಟ್

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

4 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

4 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

6 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

7 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

8 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

8 hours ago