Featured

ಬಿಜೆಪಿ ಸಂಸದರು ತಳ್ಳಿದ್ದರಿಂದ ಮೊಣಕಾಲುಗಳಿಗೆ ಗಾಯವಾಗಿದೆ : ಖರ್ಗೆ ಆರೋಪ – vishwanews24

ಬಿಜೆಪಿ ಸಂಸದರು ತಳ್ಳಿದ್ದರಿಂದ ಮೊಣಕಾಲುಗಳಿಗೆ ಗಾಯವಾಗಿದೆ: ಖರ್ಗೆ ಗಂಭೀರ ಆರೋಪ, ಸ್ಪೀಕರ್​ಗೆ ಪತ್ರ

ಹೊಸದಿಲ್ಲಿ : ಸಂಸತ್ತಿನ ಹೊರಗೆ ಕಾಂಗ್ರೆಸ್​ ಪ್ರತಿಭಟನೆ ವೇಳೆ ತನ್ನನ್ನು ಬಿಜೆಪಿ ಸಂಸದರು ತಳ್ಳಿ ಬೀಳಿಸಿದ್ದಾರೆ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಬಿಜೆಪಿ ಸಂಸದರು ನನ್ನನ್ನು ತಳ್ಳಿ ಗಾಯಗೊಳಿಸಿದ್ದಾರೆ, ಸಂಸದರೊಂದಿಗೆ ಸಂಸತ್​ನ ಮಕರ ದ್ವಾರವನ್ನು ತಲುಪಿದಾಗ ನನ್ನನ್ನು ಬಿಜೆಪಿ ಸಂಸದರು ತಳ್ಳಿದ್ದಾರೆ ನಾನು ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದಿದ್ದೆ.

ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮೊಣಕಾಲುಗಳಿಗೆ ಗಾಯವಾಗಿದೆ , ಕಾಂಗ್ರೆಸ್ ಸಂಸದರು ಕುರ್ಚಿ ತಂದು ನನ್ನನ್ನು ಕೂರಿಸಿದರು. ಬಹಳ ಕಷ್ಟದಿಂದ ಮತ್ತು ನನ್ನ ಸಹೋದ್ಯೋಗಿಗಳ ಬೆಂಬಲದಿಂದ ಸದನಕ್ಕೆ ಕುಂಟುತ್ತಾ ಬಂದೆ ಎಂದು ಆರೋಪ ಮಾಡಿ ಸ್ಪೀಕರ್​ಗೆ ಖರ್ಗೆ ಪತ್ರ ಬರೆದಿದ್ದಾರೆ.

 

 

 

ಇಂದು ಬೆಳಗ್ಗೆಯಷ್ಟೇ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ತಲೆಗೆ ಗಾಯವಾಗಿದ್ದು, ರಾಹುಲ್ ಗಾಂಧಿಯೇ ತನ್ನನ್ನು ತಳ್ಳಿ ಬೀಳಿಸಿದ್ದರು ಎಂದು ಆರೋಪಿಸಿದ್ದರು. ಈ ಆರೋಪದ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆಯವರ ಆರೋಪವೂ ಕೇಳಿಬಂದಿದೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಷಯವಾಗಿ ಪ್ರತಿಪಕ್ಷಗಳು ಮತ್ತು ಆಡಳಿತ ಪಕ್ಷದ ಸಂಸದರು ಗುರುವಾರ ಸಂಸತ್ತಿನ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದರು. ಇನ್ನೂ ಸಂಸತ್‌ ಭವನ ಆವರಣದಲ್ಲಿ ನಡೆದ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, ನಾನು ಯಾರನ್ನೂ ತಳ್ಳಿಲ್ಲ ಸಂಸತ್ತಿನ ಪ್ರವೇಶದ್ವಾರದ ಮೂಲಕ ಸಂಸತ್ ಭವನದ ಒಳಗೆ ಹೋಗಲು ಪ್ರಯತ್ನಿಸುತ್ತಿದ್ದೆ. ಈ ವೇಳೆ ಬಿಜೆಪಿ ಸಂಸದರೇ ನನ್ನನ್ನು ತಡೆದರು, ತಳ್ಳಿದರು ಮತ್ತು ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದರು ಎಂದಿದ್ದಾರೆ.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago