ಹೊಸದಿಲ್ಲಿ : ಸಂಸತ್ತಿನ ಹೊರಗೆ ಕಾಂಗ್ರೆಸ್ ಪ್ರತಿಭಟನೆ ವೇಳೆ ತನ್ನನ್ನು ಬಿಜೆಪಿ ಸಂಸದರು ತಳ್ಳಿ ಬೀಳಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಬಿಜೆಪಿ ಸಂಸದರು ನನ್ನನ್ನು ತಳ್ಳಿ ಗಾಯಗೊಳಿಸಿದ್ದಾರೆ, ಸಂಸದರೊಂದಿಗೆ ಸಂಸತ್ನ ಮಕರ ದ್ವಾರವನ್ನು ತಲುಪಿದಾಗ ನನ್ನನ್ನು ಬಿಜೆಪಿ ಸಂಸದರು ತಳ್ಳಿದ್ದಾರೆ ನಾನು ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದಿದ್ದೆ.
ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮೊಣಕಾಲುಗಳಿಗೆ ಗಾಯವಾಗಿದೆ , ಕಾಂಗ್ರೆಸ್ ಸಂಸದರು ಕುರ್ಚಿ ತಂದು ನನ್ನನ್ನು ಕೂರಿಸಿದರು. ಬಹಳ ಕಷ್ಟದಿಂದ ಮತ್ತು ನನ್ನ ಸಹೋದ್ಯೋಗಿಗಳ ಬೆಂಬಲದಿಂದ ಸದನಕ್ಕೆ ಕುಂಟುತ್ತಾ ಬಂದೆ ಎಂದು ಆರೋಪ ಮಾಡಿ ಸ್ಪೀಕರ್ಗೆ ಖರ್ಗೆ ಪತ್ರ ಬರೆದಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ತಲೆಗೆ ಗಾಯವಾಗಿದ್ದು, ರಾಹುಲ್ ಗಾಂಧಿಯೇ ತನ್ನನ್ನು ತಳ್ಳಿ ಬೀಳಿಸಿದ್ದರು ಎಂದು ಆರೋಪಿಸಿದ್ದರು. ಈ ಆರೋಪದ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆಯವರ ಆರೋಪವೂ ಕೇಳಿಬಂದಿದೆ.
ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಷಯವಾಗಿ ಪ್ರತಿಪಕ್ಷಗಳು ಮತ್ತು ಆಡಳಿತ ಪಕ್ಷದ ಸಂಸದರು ಗುರುವಾರ ಸಂಸತ್ತಿನ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದರು. ಇನ್ನೂ ಸಂಸತ್ ಭವನ ಆವರಣದಲ್ಲಿ ನಡೆದ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, ನಾನು ಯಾರನ್ನೂ ತಳ್ಳಿಲ್ಲ ಸಂಸತ್ತಿನ ಪ್ರವೇಶದ್ವಾರದ ಮೂಲಕ ಸಂಸತ್ ಭವನದ ಒಳಗೆ ಹೋಗಲು ಪ್ರಯತ್ನಿಸುತ್ತಿದ್ದೆ. ಈ ವೇಳೆ ಬಿಜೆಪಿ ಸಂಸದರೇ ನನ್ನನ್ನು ತಡೆದರು, ತಳ್ಳಿದರು ಮತ್ತು ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದರು ಎಂದಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…