Featured

ಬಿಜೆಪಿ ಸಂಸದರು ತಳ್ಳಿದ್ದರಿಂದ ಮೊಣಕಾಲುಗಳಿಗೆ ಗಾಯವಾಗಿದೆ : ಖರ್ಗೆ ಆರೋಪ – vishwanews24

ಬಿಜೆಪಿ ಸಂಸದರು ತಳ್ಳಿದ್ದರಿಂದ ಮೊಣಕಾಲುಗಳಿಗೆ ಗಾಯವಾಗಿದೆ: ಖರ್ಗೆ ಗಂಭೀರ ಆರೋಪ, ಸ್ಪೀಕರ್​ಗೆ ಪತ್ರ

ಹೊಸದಿಲ್ಲಿ : ಸಂಸತ್ತಿನ ಹೊರಗೆ ಕಾಂಗ್ರೆಸ್​ ಪ್ರತಿಭಟನೆ ವೇಳೆ ತನ್ನನ್ನು ಬಿಜೆಪಿ ಸಂಸದರು ತಳ್ಳಿ ಬೀಳಿಸಿದ್ದಾರೆ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಬಿಜೆಪಿ ಸಂಸದರು ನನ್ನನ್ನು ತಳ್ಳಿ ಗಾಯಗೊಳಿಸಿದ್ದಾರೆ, ಸಂಸದರೊಂದಿಗೆ ಸಂಸತ್​ನ ಮಕರ ದ್ವಾರವನ್ನು ತಲುಪಿದಾಗ ನನ್ನನ್ನು ಬಿಜೆಪಿ ಸಂಸದರು ತಳ್ಳಿದ್ದಾರೆ ನಾನು ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದಿದ್ದೆ.

ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮೊಣಕಾಲುಗಳಿಗೆ ಗಾಯವಾಗಿದೆ , ಕಾಂಗ್ರೆಸ್ ಸಂಸದರು ಕುರ್ಚಿ ತಂದು ನನ್ನನ್ನು ಕೂರಿಸಿದರು. ಬಹಳ ಕಷ್ಟದಿಂದ ಮತ್ತು ನನ್ನ ಸಹೋದ್ಯೋಗಿಗಳ ಬೆಂಬಲದಿಂದ ಸದನಕ್ಕೆ ಕುಂಟುತ್ತಾ ಬಂದೆ ಎಂದು ಆರೋಪ ಮಾಡಿ ಸ್ಪೀಕರ್​ಗೆ ಖರ್ಗೆ ಪತ್ರ ಬರೆದಿದ್ದಾರೆ.

 

 

 

ಇಂದು ಬೆಳಗ್ಗೆಯಷ್ಟೇ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ತಲೆಗೆ ಗಾಯವಾಗಿದ್ದು, ರಾಹುಲ್ ಗಾಂಧಿಯೇ ತನ್ನನ್ನು ತಳ್ಳಿ ಬೀಳಿಸಿದ್ದರು ಎಂದು ಆರೋಪಿಸಿದ್ದರು. ಈ ಆರೋಪದ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆಯವರ ಆರೋಪವೂ ಕೇಳಿಬಂದಿದೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಷಯವಾಗಿ ಪ್ರತಿಪಕ್ಷಗಳು ಮತ್ತು ಆಡಳಿತ ಪಕ್ಷದ ಸಂಸದರು ಗುರುವಾರ ಸಂಸತ್ತಿನ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದರು. ಇನ್ನೂ ಸಂಸತ್‌ ಭವನ ಆವರಣದಲ್ಲಿ ನಡೆದ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, ನಾನು ಯಾರನ್ನೂ ತಳ್ಳಿಲ್ಲ ಸಂಸತ್ತಿನ ಪ್ರವೇಶದ್ವಾರದ ಮೂಲಕ ಸಂಸತ್ ಭವನದ ಒಳಗೆ ಹೋಗಲು ಪ್ರಯತ್ನಿಸುತ್ತಿದ್ದೆ. ಈ ವೇಳೆ ಬಿಜೆಪಿ ಸಂಸದರೇ ನನ್ನನ್ನು ತಡೆದರು, ತಳ್ಳಿದರು ಮತ್ತು ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದರು ಎಂದಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago