ಬಿಜೆಪಿ ಸಂಸದ ಅನಂತಕುಮಾರ್ ಹೆಗ್ಡೆಗೆ ಜೀವ ಬೆದರಿಕೆ ಕರೆ

Featured, ರಾಜ್ಯ ನ್ಯೂಸ್

ಶಿರಸಿ : ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರ ಮನೆಗೆ ನಿನ್ನೆ ತಡರಾತ್ರಿ ಜೀವ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ.

ನಿನ್ನೆ ತಡರಾತ್ರಿ 1.45 ರ ಸುಮಾರಿಗೆ ಅನಂತ್ ಕುಮಾರ್ ಹೆಗಡೆ ಮನೆಯ ಲ್ಯಾಂಡ್ ಲೈನ್ ಗೆ ದೂರವಾಣಿ ಕರೆ ಬಂದಿದೆ. ಆದರೆ, ಅವರು ಮನೆಯಲ್ಲಿರಲಿಲ್ಲ. ಹಾಗಾಗಿ, ಅವರ ಪತ್ನಿ ರೂಪಾ ಹೆಗಡೆ ಕರೆ ಸ್ವೀಕರಿಸಿ ಮಾತನಾಡಿದ್ದಾರೆ. ಈ ವೇಳೆ ಕರೆ ಮಾಡಿದ ಅನಾಮಿಕರು ಅವಾಚ್ಯ ಶಬ್ದಗಳಿಂದ ಅವರಿಗೆ ಬಯ್ಯಲು ಆರಂಭಿಸಿದ್ದಾನೆ ಎನ್ನಲಾಗಿದೆ.

ಕರೆ ಮಾಡಿದವರು ಆವಾಚ್ಯ ಶಬ್ದಗಳಿಂದ ಬಯ್ಯಲು ಶುರುಮಾಡಿದಾಗ ರೂಪಾ ಅವರು ಕಾಲ್ ಕಟ್ ಮಾಡಿದ್ದಾರೆ. ಆದರೂ ಪದೇ ಪದೆ ಕರೆಗಳು ಬರುತ್ತಿದ್ದವು ಎನ್ನಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರ ಆಪ್ತ ಸಹಾಯಕ ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.