ನವದೆಹಲಿ:ಮದ್ಯಪ್ರದೇಶದ ಖಾಂಡ್ವಾದ ಬಿಜೆಪಿ ಸಂಸದ ನಂದ್ ಕುಮಾರ್ ಸಿಂಗ್ ಚೌಹಾಣ್ ಅವರು ದೆಹಲಿ-ಗುರುಗ್ರಾಮ್ನ ಮೇದಂತ ಆಸ್ಪತ್ರೆಯಲ್ಲಿ ಮಾ.1ರ ಸೋಮವಾರ ರಾತ್ರಿ ನಿಧನರಾದರು.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಕೊರೊನಾ ಸೋಂಕು ತಗುಲಿದ್ದು ಅವರನ್ನು ವೆಂಟಿಲೇಟರ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೊರೊನಾ ಪಾಸಿಟಿವ್ ಆಗಿದ್ದ ಅವರು ಜನವರಿ 11 ರಂದು ಭೋಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದೆಹಲಿಯ ಮೇದಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಚೌಹಾಣ್ ಅವರ ಪುತ್ರ ಹರ್ಷವರ್ಧನ್ ಚೌಹಾನ್ ಅವರು ತಂದೆಯ ಮರಣವನ್ನು ಖಚಿತಪಡಿಸಿದ್ದು , ಮೃತದೇಹವನ್ನು ಇಂದು ಮಧ್ಯಾಹ್ನ ಏರ್ ಆಂಬ್ಯುಲೆನ್ಸ್ ಮೂಲಕ ದೆಹಲಿಯಿಂದ ಖಾಂಡ್ವಾ ವಾಯುನೆಲೆಗೆ ತಂದು ಮತ್ತು ಅಲ್ಲಿಂದ ಬುರ್ಹಾನ್ಪುರಕ್ಕೆ ಕರೆದೊಯ್ಯಲಾಗುವುದು ಎಂದು ಹೇಳಲಾಗುತ್ತಿದೆ. ಅಂತ್ಯಕ್ರಿಯೆ ಶಾಪುರದಲ್ಲಿ ನಡೆಯಲಿದೆ.
ಪ್ರಧಾನಿ ಮೋದಿ ಚೌಹಾಣ್ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…