ನವದೆಹಲಿ:ಮದ್ಯಪ್ರದೇಶದ ಖಾಂಡ್ವಾದ ಬಿಜೆಪಿ ಸಂಸದ ನಂದ್ ಕುಮಾರ್ ಸಿಂಗ್ ಚೌಹಾಣ್ ಅವರು ದೆಹಲಿ-ಗುರುಗ್ರಾಮ್ನ ಮೇದಂತ ಆಸ್ಪತ್ರೆಯಲ್ಲಿ ಮಾ.1ರ ಸೋಮವಾರ ರಾತ್ರಿ ನಿಧನರಾದರು.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಕೊರೊನಾ ಸೋಂಕು ತಗುಲಿದ್ದು ಅವರನ್ನು ವೆಂಟಿಲೇಟರ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೊರೊನಾ ಪಾಸಿಟಿವ್ ಆಗಿದ್ದ ಅವರು ಜನವರಿ 11 ರಂದು ಭೋಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದೆಹಲಿಯ ಮೇದಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಚೌಹಾಣ್ ಅವರ ಪುತ್ರ ಹರ್ಷವರ್ಧನ್ ಚೌಹಾನ್ ಅವರು ತಂದೆಯ ಮರಣವನ್ನು ಖಚಿತಪಡಿಸಿದ್ದು , ಮೃತದೇಹವನ್ನು ಇಂದು ಮಧ್ಯಾಹ್ನ ಏರ್ ಆಂಬ್ಯುಲೆನ್ಸ್ ಮೂಲಕ ದೆಹಲಿಯಿಂದ ಖಾಂಡ್ವಾ ವಾಯುನೆಲೆಗೆ ತಂದು ಮತ್ತು ಅಲ್ಲಿಂದ ಬುರ್ಹಾನ್ಪುರಕ್ಕೆ ಕರೆದೊಯ್ಯಲಾಗುವುದು ಎಂದು ಹೇಳಲಾಗುತ್ತಿದೆ. ಅಂತ್ಯಕ್ರಿಯೆ ಶಾಪುರದಲ್ಲಿ ನಡೆಯಲಿದೆ.
ಪ್ರಧಾನಿ ಮೋದಿ ಚೌಹಾಣ್ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…